ಚಿತ್ರದುರ್ಗ: ‘ಕೊರೊನಾ ಮುಕ್ತ ರಾಜ್ಯ ನಿರ್ಮಾಣ ಆಗುವವರೆಗೂ 10ನೇ ತರಗತಿವರೆಗೆ ಶಾಲೆ ಆರಂಭಿಸದಿರುವುದೇ ಸೂಕ್ತ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸರ್ಕಾರವನ್ನು ಒತ್ತಾಯಿಸಿದರು.
ಮುರುಘಾಮಠಕ್ಕೆ ಗುರುವಾರ ಭೇಟಿ ನೀಡಿದ ನಂತರ ಮಾತನಾಡಿದ ಅವರು, ‘ಒಂದನೇ ತರಗತಿಯಿಂದ ಪಿಯುವರೆಗೆ ಆನ್ಲೈನ್ ಶಿಕ್ಷಣ ಸಾಧ್ಯವಿಲ್ಲ. ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ರೀತಿ ಶಿಕ್ಷಣ ನೀಡುವುದು ಅಪಾಯಕಾರಿ. ಕೊರೊನಾ ಹಿನ್ನೆಲೆಯಲ್ಲಿ ಅನೇಕ ಸಂಸ್ಥೆಗಳು ಇದಕ್ಕೆ ಒತ್ತು ನೀಡುತ್ತಿದ್ದು, ಇದು ಸರಿಯಲ್ಲ’ ಎಂದರು.
‘ದಸರಾ ರಜೆ ರದ್ದು ಮಾಡಬೇಕು. ಜಯಂತಿ ಆಚರಣೆ ದಿನದ ರಜೆಗಳನ್ನು ರದ್ದುಗೊಳಿಸಬೇಕು. ಅಗತ್ಯ ಮುಂಜಾಗ್ರತಾ ಕ್ರಮದೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಬೇಕು’ ಎಂದು ಒತ್ತಾಯಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.