<p><strong>ಬೆಂಗಳೂರು:</strong> ಕೆಲವರು ಕ್ವಾರಂಟೈನ್ ಉಲ್ಲಂಘನೆ ಮಾಡುತ್ತಿದ್ದು, ಅಂತಹವರಿಗೆ ನೋಟಿಸ್ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ವಾರಂಟೈನ್ಗೆ ಒಳಗಾದವರನ್ನು ಸಂಪೂರ್ಣವಾಗಿ ಗುರುತಿಸುವ ಕೆಲಸ ಮುಂದುವರೆದಿದೆ. ಉಲ್ಲಂಘಿಸುವವರಿಗೆ ನೋಟಿಸ್ ನೀಡಲಾಗುವುದು. ಕ್ವಾರಂಟೈನ್ ಎಲ್ಲಿಂದ ಎಲ್ಲಿಯವರೆ ಇರುತ್ತದೆ ಎಂದು ನೋಟೀಸ್ನಲ್ಲಿ ಇರುತ್ತದೆ. 9 ಜಿಲ್ಲೆಗಳಲ್ಲಿ ಸೆಕ್ಷನ್ಮುಂದುವರಿಲಿದೆ’ ಎಂದು ಹೇಳಿದರು.</p>.<p>ಖಾಸಗಿ ಬಸ್, ಟ್ಯಾಕ್ಸಿಗಳ ಓಡಾಟ ನಿಷೇಧಿಸಬೇಕೇ ಎಂಬ ಬಗ್ಗೆ ಸಂಜೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.</p>.<p>9 ಜಿಲ್ಲೆಗಳಲ್ಲಿ ವಾಣಿಜ್ಯ ವ್ಯವಹಾರ ಇರುವುದಿಲ್ಲ. ನಿತ್ಯದ ಅವಶ್ಯಕತೆಗಳ ಮಾರಾಟಕ್ಕೆ ಮಾತ್ರ ಅವಕಾಶ ಎಂದು ಸಚಿವರು ಹೇಳಿದರು.</p>.<p>ಕೈದಿಗಳು ಜೈಲಿನ ಒಳಗೆ ಕ್ವಾರಂಟೈನ್ಗೆ ಒಳಗಾಗುತ್ತಿದ್ದಾರೆ. ಹೊಸ ಕೈದಿಗಳಿಗೆ ಪೂರ್ತಿ ಪ್ರಮಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದರು.</p>.<p>ಕೈದಿಗಳು ನಿತ್ಯ 5 ಸಾವಿರ ಮಾಸ್ಕ್ ತಯಾರಿಸುತ್ತಿದ್ದಾರೆ. ಈಗಾಗಲೇ 17 ಸಾವಿರ ಮಾಸ್ಕ್ ನೀಡಿದ್ದಾರೆ. ಇನ್ನು ಒಂದು ವಾರ ಇಲಾಖೆಗೆ ಅಗತ್ಯವಿರುವ ಮಾಸ್ಕ್ ತಯಾರು ಮಾಡಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಲವರು ಕ್ವಾರಂಟೈನ್ ಉಲ್ಲಂಘನೆ ಮಾಡುತ್ತಿದ್ದು, ಅಂತಹವರಿಗೆ ನೋಟಿಸ್ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ವಾರಂಟೈನ್ಗೆ ಒಳಗಾದವರನ್ನು ಸಂಪೂರ್ಣವಾಗಿ ಗುರುತಿಸುವ ಕೆಲಸ ಮುಂದುವರೆದಿದೆ. ಉಲ್ಲಂಘಿಸುವವರಿಗೆ ನೋಟಿಸ್ ನೀಡಲಾಗುವುದು. ಕ್ವಾರಂಟೈನ್ ಎಲ್ಲಿಂದ ಎಲ್ಲಿಯವರೆ ಇರುತ್ತದೆ ಎಂದು ನೋಟೀಸ್ನಲ್ಲಿ ಇರುತ್ತದೆ. 9 ಜಿಲ್ಲೆಗಳಲ್ಲಿ ಸೆಕ್ಷನ್ಮುಂದುವರಿಲಿದೆ’ ಎಂದು ಹೇಳಿದರು.</p>.<p>ಖಾಸಗಿ ಬಸ್, ಟ್ಯಾಕ್ಸಿಗಳ ಓಡಾಟ ನಿಷೇಧಿಸಬೇಕೇ ಎಂಬ ಬಗ್ಗೆ ಸಂಜೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.</p>.<p>9 ಜಿಲ್ಲೆಗಳಲ್ಲಿ ವಾಣಿಜ್ಯ ವ್ಯವಹಾರ ಇರುವುದಿಲ್ಲ. ನಿತ್ಯದ ಅವಶ್ಯಕತೆಗಳ ಮಾರಾಟಕ್ಕೆ ಮಾತ್ರ ಅವಕಾಶ ಎಂದು ಸಚಿವರು ಹೇಳಿದರು.</p>.<p>ಕೈದಿಗಳು ಜೈಲಿನ ಒಳಗೆ ಕ್ವಾರಂಟೈನ್ಗೆ ಒಳಗಾಗುತ್ತಿದ್ದಾರೆ. ಹೊಸ ಕೈದಿಗಳಿಗೆ ಪೂರ್ತಿ ಪ್ರಮಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದರು.</p>.<p>ಕೈದಿಗಳು ನಿತ್ಯ 5 ಸಾವಿರ ಮಾಸ್ಕ್ ತಯಾರಿಸುತ್ತಿದ್ದಾರೆ. ಈಗಾಗಲೇ 17 ಸಾವಿರ ಮಾಸ್ಕ್ ನೀಡಿದ್ದಾರೆ. ಇನ್ನು ಒಂದು ವಾರ ಇಲಾಖೆಗೆ ಅಗತ್ಯವಿರುವ ಮಾಸ್ಕ್ ತಯಾರು ಮಾಡಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>