ಬಳಿಕ ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರನ್ನು ಸಂಪರ್ಕಿಸಿದಾಗ, ‘ವಿದೇಶಿ ಪ್ರವಾಸಿಗರು ಬಂದದ್ದು ನಿಜ. ಎಲ್ಲರ ತಪಾಸಣೆ ನಡೆಸಿ, ಕೆಲವು ದಿನಗಳವರೆಗೆ ಮೇಲ್ವಿಚಾರಣೆಯಲ್ಲಿ ಇರಬೇಕಾಗುತ್ತದೆ ಎಂದು ತಿಳಿಸಲಾಗಿತ್ತು. ಆದರೆ, ಅದನ್ನವರು ನಿರಾಕರಿಸಿ, ಬಂದ ಊರಿಗೆ ವಾಪಸ್ ಹೋಗುವುದಾಗಿ ತಿಳಿಸಿದರು. ಹಾಗಾಗಿ ಅವರನ್ನು ಕಳುಹಿಸಿಕೊಡಲಾಯಿತು’ ಎಂದು ತಿಳಿಸಿದರು.