<p><strong>ಬೆಂಗಳೂರು: </strong>ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 2,298 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 995 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನಲ್ಲೇ 1,398 ಹೊಸ ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 4.21 ಲಕ್ಷ ದಾಟಿದೆ. ಉಳಿದಂತೆ ಬೀದರ್ನಲ್ಲಿ 82 ಪ್ರಕರಣಗಳು, ಕಲಬುರ್ಗಿಯಲ್ಲಿ 118 ಪ್ರಕರಣಗಳು, ಮೈಸೂರಿನಲ್ಲಿ 74, ತುಮಕೂರಿನಲ್ಲಿ 94, ಉಡುಪಿಯಲ್ಲಿ 79, ಹಾಸನದಲ್ಲಿ 60 ಹಾಗೂ ದಕ್ಷಿಣ ಕನ್ನಡದಲ್ಲಿ 54 ಪ್ರಕರಣಗಳು ದಾಖಲಾಗಿವೆ.</p>.<p>ಐಸಿಯುನಲ್ಲಿ 143 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9,75,955 ಪ್ರಕರಣಗಳ ಪೈಕಿ 9,46,589 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 12,461 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಪ್ರಸ್ತುತ 16,886 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.</p>.<p>ಸೋಂಕು ದೃಢ ಪ್ರಮಾಣ ಶೇ 2.12ಕ್ಕೆ ತಲುಪಿದ್ದು, ಮರಣ ಪ್ರಮಾಣ ಶೇ 0.52 ರಷ್ಟಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಒಂದು ದಿನದ ಅವಧಿಯಲ್ಲಿ 1.08 ಲಕ್ಷ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.</p>.<p>ಬುಧವಾರದ ವರೆಗೂ 28,91,719 ಡೋಸ್ಗಳಷ್ಟು ಕೋವಿಡ್ ಲಸಿಕೆ ಹಾಕಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 5.92 ಲಕ್ಷ ಡೋಸ್ಗಳಷ್ಟು ಲಸಿಕೆ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 2,298 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 995 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನಲ್ಲೇ 1,398 ಹೊಸ ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 4.21 ಲಕ್ಷ ದಾಟಿದೆ. ಉಳಿದಂತೆ ಬೀದರ್ನಲ್ಲಿ 82 ಪ್ರಕರಣಗಳು, ಕಲಬುರ್ಗಿಯಲ್ಲಿ 118 ಪ್ರಕರಣಗಳು, ಮೈಸೂರಿನಲ್ಲಿ 74, ತುಮಕೂರಿನಲ್ಲಿ 94, ಉಡುಪಿಯಲ್ಲಿ 79, ಹಾಸನದಲ್ಲಿ 60 ಹಾಗೂ ದಕ್ಷಿಣ ಕನ್ನಡದಲ್ಲಿ 54 ಪ್ರಕರಣಗಳು ದಾಖಲಾಗಿವೆ.</p>.<p>ಐಸಿಯುನಲ್ಲಿ 143 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9,75,955 ಪ್ರಕರಣಗಳ ಪೈಕಿ 9,46,589 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 12,461 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಪ್ರಸ್ತುತ 16,886 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.</p>.<p>ಸೋಂಕು ದೃಢ ಪ್ರಮಾಣ ಶೇ 2.12ಕ್ಕೆ ತಲುಪಿದ್ದು, ಮರಣ ಪ್ರಮಾಣ ಶೇ 0.52 ರಷ್ಟಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಒಂದು ದಿನದ ಅವಧಿಯಲ್ಲಿ 1.08 ಲಕ್ಷ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.</p>.<p>ಬುಧವಾರದ ವರೆಗೂ 28,91,719 ಡೋಸ್ಗಳಷ್ಟು ಕೋವಿಡ್ ಲಸಿಕೆ ಹಾಕಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 5.92 ಲಕ್ಷ ಡೋಸ್ಗಳಷ್ಟು ಲಸಿಕೆ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>