‘ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹೀಗಾಗಿ, ಫಲಕ ಹಾಕುವ ಪರಿಪಾಠವನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು’ ಎಂದೂ ಅವರು ಹೇಳಿದ್ದಾರೆ.