<p><strong>ಬೆಂಗಳೂರು:</strong> ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯದ 25 ಸಾವಿರಕ್ಕೂ ಹೆಚ್ಚು ವೈದ್ಯರಿಗೆ ಹಾಗೂ ಸಾವಿರಾರು ವೈದ್ಯಕೀಯ ಸೇವಾ ಸಿಬ್ಬಂದಿಗೆ ಆನ್ಲೈನ್ ಮೂಲಕ ತರಬೇತಿ ಕಾರ್ಯಾಗಾರ ಆರಂಭಿಸಲಾಗಿದ್ದು, ಕೋವಿಡ್–19 ಚಿಕಿತ್ಸಾ ಶಿಷ್ಟಾಚಾರ ಅಳವಡಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.</p>.<p>ಕೋವಿಡ್-19 ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವುದು, ರೋಗದ ಕುರಿತು ಮಾರ್ಗದರ್ಶನ, ಅಳವಡಿಸಿಕೊಳ್ಳಬೇಕಾದ ಸುರಕ್ಷತಾ ಕ್ರಮಗಳು ಮತ್ತು ಕಾರ್ಯನಿರ್ವಹಣಾ ವಿಧಾನ ಕುರಿತು 20 ಪುಟಗಳ ಶಿಷ್ಟಾಚಾರವನ್ನು ಸಿದ್ಧಪಡಿಸಲಾಗಿದ್ದು, ದೇಶದಾದ್ಯಂತ ವೈದ್ಯರು ಇದನ್ನೇ ಕಡ್ಡಾಯವಾಗಿ ಅನುಸರಿಸಬೇಕಾಗಿದೆ.</p>.<p>ನಗರದ ನಿಮ್ಹಾನ್ಸ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ತರಬೇತಿ ಶಿಬಿರ ಆರಂಭವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇದಕ್ಕೆ ಚಾಲನೆ ನೀಡಿದರು.</p>.<p>ಕೊರೊನಾ ಎದುರಿಸಲು ಸಜ್ಜಾಗಿರುವ ವೈದ್ಯರ ಸೇವೆಯನ್ನು ಕೊಂಡಾಡಿದ ಅವರು, ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗೆ ಉತ್ತಮ ಗುಣಮಟ್ಟದ ಮುಖಗವಸು, ವೈಯಕ್ತಿಕ ಸುರಕ್ಷಾ ವ್ಯವಸ್ಥೆ, ಸಾಕಷ್ಟು ಪ್ರಮಾಣದಲ್ಲಿ ವೆಂಟಿಲೇಟರ್ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.</p>.<p><strong>ಒಂದು ರಾಷ್ಟ್ರ, ಒಂದೇ ಚಿಕಿತ್ಸೆ:</strong>ದೇಶದಾದ್ಯಂತ ಕೋವಿಡ್-19ಗೆ ನೀಡುವ ಚಿಕಿತ್ಸೆ ಒಂದೇ ರೀತಿಯಲ್ಲಿ ಇರಬೇಕು ಎಂಬ ಉದ್ದೇಶದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ತೀವ್ರವಾದ ಉಸಿರಾಟದ ಕಾಯಿಲೆ ಮತ್ತು ಅತಿಯಾದ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆ ಮತ್ತು ಸುರಕ್ಷಿತೆಗಾಗಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ವೈದ್ಯರಿಗೆ ಇಲ್ಲಿ ನೀಡಲಾಗುತ್ತಿದೆ.</p>.<p>ತರಬೇತಿಯ ಮೊದಲ ದಿನ ಸುಮಾರು 100 ವೈದ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಆನ್ಲೈನ್ ಮೂಲಕ ಸುಮಾರು 300 ವೈದ್ಯರಿಗೆ ತರಬೇತಿ ನೀಡಲಾಯಿತು. ವಿವಿಧ ಕ್ಷೇತ್ರಗಳ ತಜ್ಞರೇ ಇದ್ದ ಕಾರಣ ಹಲವಾರು ಬಗೆಯ ಸಂಶಯ ನಿವಾರಿಸುವುದು ಸಾಧ್ಯವಾಯಿತು.</p>.<p>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ, ರಾಜೀವ್ ಗಾಂಧಿ ಎದೆ ರೋಗ ಸಂಸ್ಥೆಯ ನಿರ್ದೇಶಕ ಡಾ.ನಾಗರಾಜ್, ಸೋಂಕು ನಿಯಂತ್ರಣ ತಜ್ಞರಾದ ಡಾ.ನೇಹಾ, ಡಾ.ಅರುಣಾ ರಮೇಶ್, ಮಾದರಿ ಸಂಗ್ರಹ ತಜ್ಞ ಡಾ.ವಿ.ರವಿ, ಕೋವಿಡ್–19 ತಜ್ಞ ಡಾ.ಶಿವಪ್ರಸಾದ್ ಇದ್ದರು.</p>.<p><strong>ಏನೆಲ್ಲ ತರಬೇತಿ</strong><br />ಕೊರೊನಾ ಸೋಂಕು ನಿರ್ವಹಣೆ, ರೋಗ ಪತ್ತೆ, ಆರೋಗ್ಯ ಸಂರಕ್ಷಣೆ, ಸೋಂಕು ನಿಯಂತ್ರಣ ಮತ್ತು ಸೋಂಕನ್ನು ತಡೆಯಲು ಎಲ್ಲಾ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು ಈ ಶಿಷ್ಟಾಚಾರದಲ್ಲಿ ಒಳಗೊಂಡಿದ್ದು, ಅದನ್ನು ಎಳೆ ಎಳೆಯಾಗಿ ವಿವರಿಸಿ, ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ.</p>.<p><strong>ತ್ವರಿತ ಮಾಹಿತಿ ರವಾನೆ</strong><br />ತರಬೇತಿ ಕಾರ್ಯಾಗಾರದ ವಿಡಿಯೊವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಇವುಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಾವಿರಾರು ವೈದ್ಯರಿಗೆ, ದಾದಿಯರಿಗೆ ತರಬೇತಿ ಸಾಮಗ್ರಿಯಾಗಲಿವೆ.</p>.<p><strong>1 ಲಕ್ಷ ವಿದ್ಯಾರ್ಥಿಗಳಿಗೆ ಸೂಚನೆ</strong><br />ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಅವರು ವಿಶ್ವವಿದ್ಯಾಲಯಕ್ಕೆ ಒಳಪಟ್ಟ 300ಕ್ಕೂ ಅಧಿಕ ಕಾಲೇಜುಗಳ 1 ಲಕ್ಷ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿಡಿಯೊ ಸಂದೇಶ ಕಳುಹಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಅಗತ್ಯ ಕರೆ ಬಂದಾಗ ವೈದ್ಯಕೀಯ ಸೇವೆಗೆ ಸಜ್ಜಾಗಿರುವಂತೆ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯದ 25 ಸಾವಿರಕ್ಕೂ ಹೆಚ್ಚು ವೈದ್ಯರಿಗೆ ಹಾಗೂ ಸಾವಿರಾರು ವೈದ್ಯಕೀಯ ಸೇವಾ ಸಿಬ್ಬಂದಿಗೆ ಆನ್ಲೈನ್ ಮೂಲಕ ತರಬೇತಿ ಕಾರ್ಯಾಗಾರ ಆರಂಭಿಸಲಾಗಿದ್ದು, ಕೋವಿಡ್–19 ಚಿಕಿತ್ಸಾ ಶಿಷ್ಟಾಚಾರ ಅಳವಡಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.</p>.<p>ಕೋವಿಡ್-19 ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವುದು, ರೋಗದ ಕುರಿತು ಮಾರ್ಗದರ್ಶನ, ಅಳವಡಿಸಿಕೊಳ್ಳಬೇಕಾದ ಸುರಕ್ಷತಾ ಕ್ರಮಗಳು ಮತ್ತು ಕಾರ್ಯನಿರ್ವಹಣಾ ವಿಧಾನ ಕುರಿತು 20 ಪುಟಗಳ ಶಿಷ್ಟಾಚಾರವನ್ನು ಸಿದ್ಧಪಡಿಸಲಾಗಿದ್ದು, ದೇಶದಾದ್ಯಂತ ವೈದ್ಯರು ಇದನ್ನೇ ಕಡ್ಡಾಯವಾಗಿ ಅನುಸರಿಸಬೇಕಾಗಿದೆ.</p>.<p>ನಗರದ ನಿಮ್ಹಾನ್ಸ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ತರಬೇತಿ ಶಿಬಿರ ಆರಂಭವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇದಕ್ಕೆ ಚಾಲನೆ ನೀಡಿದರು.</p>.<p>ಕೊರೊನಾ ಎದುರಿಸಲು ಸಜ್ಜಾಗಿರುವ ವೈದ್ಯರ ಸೇವೆಯನ್ನು ಕೊಂಡಾಡಿದ ಅವರು, ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗೆ ಉತ್ತಮ ಗುಣಮಟ್ಟದ ಮುಖಗವಸು, ವೈಯಕ್ತಿಕ ಸುರಕ್ಷಾ ವ್ಯವಸ್ಥೆ, ಸಾಕಷ್ಟು ಪ್ರಮಾಣದಲ್ಲಿ ವೆಂಟಿಲೇಟರ್ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.</p>.<p><strong>ಒಂದು ರಾಷ್ಟ್ರ, ಒಂದೇ ಚಿಕಿತ್ಸೆ:</strong>ದೇಶದಾದ್ಯಂತ ಕೋವಿಡ್-19ಗೆ ನೀಡುವ ಚಿಕಿತ್ಸೆ ಒಂದೇ ರೀತಿಯಲ್ಲಿ ಇರಬೇಕು ಎಂಬ ಉದ್ದೇಶದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ತೀವ್ರವಾದ ಉಸಿರಾಟದ ಕಾಯಿಲೆ ಮತ್ತು ಅತಿಯಾದ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆ ಮತ್ತು ಸುರಕ್ಷಿತೆಗಾಗಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ವೈದ್ಯರಿಗೆ ಇಲ್ಲಿ ನೀಡಲಾಗುತ್ತಿದೆ.</p>.<p>ತರಬೇತಿಯ ಮೊದಲ ದಿನ ಸುಮಾರು 100 ವೈದ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಆನ್ಲೈನ್ ಮೂಲಕ ಸುಮಾರು 300 ವೈದ್ಯರಿಗೆ ತರಬೇತಿ ನೀಡಲಾಯಿತು. ವಿವಿಧ ಕ್ಷೇತ್ರಗಳ ತಜ್ಞರೇ ಇದ್ದ ಕಾರಣ ಹಲವಾರು ಬಗೆಯ ಸಂಶಯ ನಿವಾರಿಸುವುದು ಸಾಧ್ಯವಾಯಿತು.</p>.<p>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ, ರಾಜೀವ್ ಗಾಂಧಿ ಎದೆ ರೋಗ ಸಂಸ್ಥೆಯ ನಿರ್ದೇಶಕ ಡಾ.ನಾಗರಾಜ್, ಸೋಂಕು ನಿಯಂತ್ರಣ ತಜ್ಞರಾದ ಡಾ.ನೇಹಾ, ಡಾ.ಅರುಣಾ ರಮೇಶ್, ಮಾದರಿ ಸಂಗ್ರಹ ತಜ್ಞ ಡಾ.ವಿ.ರವಿ, ಕೋವಿಡ್–19 ತಜ್ಞ ಡಾ.ಶಿವಪ್ರಸಾದ್ ಇದ್ದರು.</p>.<p><strong>ಏನೆಲ್ಲ ತರಬೇತಿ</strong><br />ಕೊರೊನಾ ಸೋಂಕು ನಿರ್ವಹಣೆ, ರೋಗ ಪತ್ತೆ, ಆರೋಗ್ಯ ಸಂರಕ್ಷಣೆ, ಸೋಂಕು ನಿಯಂತ್ರಣ ಮತ್ತು ಸೋಂಕನ್ನು ತಡೆಯಲು ಎಲ್ಲಾ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು ಈ ಶಿಷ್ಟಾಚಾರದಲ್ಲಿ ಒಳಗೊಂಡಿದ್ದು, ಅದನ್ನು ಎಳೆ ಎಳೆಯಾಗಿ ವಿವರಿಸಿ, ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ.</p>.<p><strong>ತ್ವರಿತ ಮಾಹಿತಿ ರವಾನೆ</strong><br />ತರಬೇತಿ ಕಾರ್ಯಾಗಾರದ ವಿಡಿಯೊವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಇವುಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಾವಿರಾರು ವೈದ್ಯರಿಗೆ, ದಾದಿಯರಿಗೆ ತರಬೇತಿ ಸಾಮಗ್ರಿಯಾಗಲಿವೆ.</p>.<p><strong>1 ಲಕ್ಷ ವಿದ್ಯಾರ್ಥಿಗಳಿಗೆ ಸೂಚನೆ</strong><br />ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಅವರು ವಿಶ್ವವಿದ್ಯಾಲಯಕ್ಕೆ ಒಳಪಟ್ಟ 300ಕ್ಕೂ ಅಧಿಕ ಕಾಲೇಜುಗಳ 1 ಲಕ್ಷ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿಡಿಯೊ ಸಂದೇಶ ಕಳುಹಿಸಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಅಗತ್ಯ ಕರೆ ಬಂದಾಗ ವೈದ್ಯಕೀಯ ಸೇವೆಗೆ ಸಜ್ಜಾಗಿರುವಂತೆ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>