<p><strong>ಮಂಡ್ಯ:</strong> ಕೋವಿಡ್–19ನಿಂದ ಗುಣಮುಖರಾದ ಮಂಡ್ಯದ ಸ್ವರ್ಣಸಂದ್ರದ ನಿವಾಸಿ ವಿನಯ್ ಮಂಗಳವಾರ ಮನೆಗೆ ಮರಳಿದರು. ಬಡಾವಣೆಯ ಜನರು ಚಪ್ಪಾಳೆ ತಟ್ಟಿ ಅವರನ್ನು ಸ್ವಾಗತಿಸಿದರೆ, ಮನೆಯವರು ಆರತಿ ಬೆಳಗಿ ಬರಮಾಡಿಕೊಂಡರು. ಸೋಂಕಿನ ಸವಾಲು ಗೆದ್ದ ಇವರಿಗೆ ಅಕ್ಷರಶಃ ಯುದ್ಧ ಗೆದ್ದು ಬಂದ ಸಂಭ್ರಮ.</p>.<p>ಅದೇ ಸಂಭ್ರಮದಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಮೂಲಕ ಮತ್ತಿಬ್ಬರನ್ನು ಗುಣಪಡಿಸಲು ಅನುಕೂಲವಾಗುವಂತೆ ಅವರು ತಮ್ಮ ರಕ್ತವನ್ನು ದಾನ ಮಾಡಿದ್ದಾರೆ.</p>.<p>ನಂಜನಗೂಡಿನ ಔಷಧ ಕಾರ್ಖಾನೆಯಲ್ಲಿ ಸೂಕ್ಷ್ಮಜೀವ ವಿಜ್ಞಾನಿಯಾಗಿರುವ ವಿನಯ್, ಸರ್ಕಾರಿ ಆಸ್ಪತ್ರೆಯಲ್ಲಿನ ಸೌಕರ್ಯ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ತುಂಬು ಹೃದಯದಿಂದ ಹೊಗಳಿದ್ದಾರೆ. ಆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>185ನೇ ರೋಗಿಯಾಗಿದ್ದ ಇವರು, ‘ಗುಣಮಟ್ಟದ ಚಿಕಿತ್ಸೆಯ ಜೊತೆಗೆ ಕೋವಿಡ್ ಆಸ್ಪತ್ರೆಯಲ್ಲಿ ಸಿಕ್ಕ ಸಕಲ ಸೌಲಭ್ಯ ಹಾಗೂ ಸಿಬ್ಬಂದಿ ಪ್ರೀತಿಯಿಂದ ಕೋವಿಡ್ –19 ವಿರುದ್ಧ ಗೆಲುವು ಸಾಧಿಸಲು ಸಾಧ್ಯವಾಯಿತು’ ಎಂದು ಹೇಳಿದರು.</p>.<p>‘ಸರ್ಕಾರಿ ಆಸ್ಪತ್ರೆಯಲ್ಲಿ ಇಷ್ಟೊಂದು ಸೌಲಭ್ಯವಿದೆ ಎಂದು ಎಣಿಸಿರಲಿಲ್ಲ. ವೈದ್ಯರು ನಿತ್ಯ ಆತ್ಮವಿಶ್ವಾಸ ತುಂಬುತ್ತಿದ್ದರು. ಮನೋವೈದ್ಯರು ಕೌನ್ಸೆಲಿಂಗ್ ನಡೆಸುತ್ತಿದ್ದರು. ಸಕಾಲಕ್ಕೆ ಆಹಾರ ಒದಗಿಸುತ್ತಾ, ಮನೆಯ ವಾತಾವರಣವನ್ನೇ ಕಲ್ಪಿಸಿದ್ದರು’ ಎಂದು ತಿಳಿಸಿದರು.</p>.<p>‘ಮೈಕ್ರೊಬಯಾಲಜಿಸ್ಟ್ ಆಗಿರುವುದರಿಂದ ವೈರಾಣುಗಳ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಹೀಗಾಗಿ ಚಿಕಿತ್ಸೆ ಏನಿರಬಹುದು ಎಂಬ ಬಗ್ಗೆ ಆತಂಕವಿತ್ತು. ದೇಹದಲ್ಲಿ ರೋಗನಿರೋಧಕಶಕ್ತಿ ವೃದ್ಧಿಸುವ ಔಷಧಿಗಳನ್ನಷ್ಟೇ ವೈದ್ಯರು ನೀಡಿದರು. ಹೀಗಾಗಿ ಆರೋಗ್ಯವಾಗಿ ಮನೆಗೆ ಬಂದಿದ್ದೇನೆ’ ಎಂದರು.</p>.<p>‘ಕೋವಿಡ್ 19 ರೋಗಿಗಳು ಭಯಪಡುವ ಅಗತ್ಯವಿಲ್ಲ. ಇದು ಕ್ಷಯ, ಎಚ್ಐವಿ, ಎಚ್1ಎನ್1ಗಿಂತ ಅಪಾಯಕಾರಿಯಲ್ಲ. ಆತ್ಮವಿಶ್ವಾಸ ಇರಬೇಕು. ವೈದ್ಯರನ್ನು ನಂಬಬೇಕು’ ಎಂದು ಹೇಳಿದರು.</p>.<p>‘ನಮ್ಮ ಕಂಪನಿ ಕಾರ್ಮಿಕರಲ್ಲಿ ರೋಗ ಪತ್ತೆಯಾದ ಕೂಡಲೇ ಸ್ವಯಂಪ್ರೇರಿತನಾಗಿ ಮನೆಯವರಿಂದಲೂ ಅಂತರ ಕಾಯ್ದುಕೊಂಡಿದ್ದೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೆ. ಹೀಗಾಗಿ ಕುಟುಂಬದ ಸದಸ್ಯರ ಕೋವಿಡ್–19 ಪರೀಕ್ಷಾ ಫಲಿತಾಂಶವೂ ನೆಗೆಟಿವ್ ಬಂತು’ ಎಂದರು.</p>.<p>‘ವೈದ್ಯರು, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಶುಶ್ರೂಷಕರು, ವಾರ್ಡ್ನ ಸ್ವಚ್ಛತಾ ಸಿಬ್ಬಂದಿಯ ಸೇವೆಯಿಂದ ನನಗೆ ಮರುಹುಟ್ಟು ದೊರೆತಂತಾಗಿದೆ. ಅವರಿಗೆ ನಾನು ಸದಾ ಆಭಾರಿ’ ಎಂದು ಹೇಳಿದರು.</p>.<p><strong>ರಕ್ತದಾನ: ಪ್ಲಾಸ್ಮಾ ಮಾದರಿ ಸಂಗ್ರಹ</strong><br />‘185 ರೋಗಿಯ ಇಡೀ ಕುಟುಂಬ ನಡೆದುಕೊಂಡ ರೀತಿ ಸಮಾಜಕ್ಕೆ ಮಾದರಿಯಾಗಿದೆ. ಪ್ರಾಥಮಿಕ ಸಂಪರ್ಕಿತರು ಸೇರಿ 6 ಮಂದಿ ನೆಗೆಟಿವ್ ಆಗಿ ಮನೆಗೆ ಮರಳಿದ್ದಾರೆ. ಗುಣಮುಖರಾದ ವ್ಯಕ್ತಿಯ ರಕ್ತ ಮಾದರಿ ಸಂಗ್ರಹಿಸಲಾಗಿದೆ. ಗಂಭೀರ ಸ್ಥಿತಿ ತಲುಪುವ ಇಬ್ಬರು ರೋಗಿಗಳನ್ನುಪ್ಲಾಸ್ಮಾ ಕಣಗಳಿಂದ ಗುಣಪಡಿಸಬಹುದಾಗಿದೆ’ ಎಂದು ವೈದ್ಯರೂ ಆದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೋವಿಡ್–19ನಿಂದ ಗುಣಮುಖರಾದ ಮಂಡ್ಯದ ಸ್ವರ್ಣಸಂದ್ರದ ನಿವಾಸಿ ವಿನಯ್ ಮಂಗಳವಾರ ಮನೆಗೆ ಮರಳಿದರು. ಬಡಾವಣೆಯ ಜನರು ಚಪ್ಪಾಳೆ ತಟ್ಟಿ ಅವರನ್ನು ಸ್ವಾಗತಿಸಿದರೆ, ಮನೆಯವರು ಆರತಿ ಬೆಳಗಿ ಬರಮಾಡಿಕೊಂಡರು. ಸೋಂಕಿನ ಸವಾಲು ಗೆದ್ದ ಇವರಿಗೆ ಅಕ್ಷರಶಃ ಯುದ್ಧ ಗೆದ್ದು ಬಂದ ಸಂಭ್ರಮ.</p>.<p>ಅದೇ ಸಂಭ್ರಮದಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಮೂಲಕ ಮತ್ತಿಬ್ಬರನ್ನು ಗುಣಪಡಿಸಲು ಅನುಕೂಲವಾಗುವಂತೆ ಅವರು ತಮ್ಮ ರಕ್ತವನ್ನು ದಾನ ಮಾಡಿದ್ದಾರೆ.</p>.<p>ನಂಜನಗೂಡಿನ ಔಷಧ ಕಾರ್ಖಾನೆಯಲ್ಲಿ ಸೂಕ್ಷ್ಮಜೀವ ವಿಜ್ಞಾನಿಯಾಗಿರುವ ವಿನಯ್, ಸರ್ಕಾರಿ ಆಸ್ಪತ್ರೆಯಲ್ಲಿನ ಸೌಕರ್ಯ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ತುಂಬು ಹೃದಯದಿಂದ ಹೊಗಳಿದ್ದಾರೆ. ಆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>185ನೇ ರೋಗಿಯಾಗಿದ್ದ ಇವರು, ‘ಗುಣಮಟ್ಟದ ಚಿಕಿತ್ಸೆಯ ಜೊತೆಗೆ ಕೋವಿಡ್ ಆಸ್ಪತ್ರೆಯಲ್ಲಿ ಸಿಕ್ಕ ಸಕಲ ಸೌಲಭ್ಯ ಹಾಗೂ ಸಿಬ್ಬಂದಿ ಪ್ರೀತಿಯಿಂದ ಕೋವಿಡ್ –19 ವಿರುದ್ಧ ಗೆಲುವು ಸಾಧಿಸಲು ಸಾಧ್ಯವಾಯಿತು’ ಎಂದು ಹೇಳಿದರು.</p>.<p>‘ಸರ್ಕಾರಿ ಆಸ್ಪತ್ರೆಯಲ್ಲಿ ಇಷ್ಟೊಂದು ಸೌಲಭ್ಯವಿದೆ ಎಂದು ಎಣಿಸಿರಲಿಲ್ಲ. ವೈದ್ಯರು ನಿತ್ಯ ಆತ್ಮವಿಶ್ವಾಸ ತುಂಬುತ್ತಿದ್ದರು. ಮನೋವೈದ್ಯರು ಕೌನ್ಸೆಲಿಂಗ್ ನಡೆಸುತ್ತಿದ್ದರು. ಸಕಾಲಕ್ಕೆ ಆಹಾರ ಒದಗಿಸುತ್ತಾ, ಮನೆಯ ವಾತಾವರಣವನ್ನೇ ಕಲ್ಪಿಸಿದ್ದರು’ ಎಂದು ತಿಳಿಸಿದರು.</p>.<p>‘ಮೈಕ್ರೊಬಯಾಲಜಿಸ್ಟ್ ಆಗಿರುವುದರಿಂದ ವೈರಾಣುಗಳ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಹೀಗಾಗಿ ಚಿಕಿತ್ಸೆ ಏನಿರಬಹುದು ಎಂಬ ಬಗ್ಗೆ ಆತಂಕವಿತ್ತು. ದೇಹದಲ್ಲಿ ರೋಗನಿರೋಧಕಶಕ್ತಿ ವೃದ್ಧಿಸುವ ಔಷಧಿಗಳನ್ನಷ್ಟೇ ವೈದ್ಯರು ನೀಡಿದರು. ಹೀಗಾಗಿ ಆರೋಗ್ಯವಾಗಿ ಮನೆಗೆ ಬಂದಿದ್ದೇನೆ’ ಎಂದರು.</p>.<p>‘ಕೋವಿಡ್ 19 ರೋಗಿಗಳು ಭಯಪಡುವ ಅಗತ್ಯವಿಲ್ಲ. ಇದು ಕ್ಷಯ, ಎಚ್ಐವಿ, ಎಚ್1ಎನ್1ಗಿಂತ ಅಪಾಯಕಾರಿಯಲ್ಲ. ಆತ್ಮವಿಶ್ವಾಸ ಇರಬೇಕು. ವೈದ್ಯರನ್ನು ನಂಬಬೇಕು’ ಎಂದು ಹೇಳಿದರು.</p>.<p>‘ನಮ್ಮ ಕಂಪನಿ ಕಾರ್ಮಿಕರಲ್ಲಿ ರೋಗ ಪತ್ತೆಯಾದ ಕೂಡಲೇ ಸ್ವಯಂಪ್ರೇರಿತನಾಗಿ ಮನೆಯವರಿಂದಲೂ ಅಂತರ ಕಾಯ್ದುಕೊಂಡಿದ್ದೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೆ. ಹೀಗಾಗಿ ಕುಟುಂಬದ ಸದಸ್ಯರ ಕೋವಿಡ್–19 ಪರೀಕ್ಷಾ ಫಲಿತಾಂಶವೂ ನೆಗೆಟಿವ್ ಬಂತು’ ಎಂದರು.</p>.<p>‘ವೈದ್ಯರು, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಶುಶ್ರೂಷಕರು, ವಾರ್ಡ್ನ ಸ್ವಚ್ಛತಾ ಸಿಬ್ಬಂದಿಯ ಸೇವೆಯಿಂದ ನನಗೆ ಮರುಹುಟ್ಟು ದೊರೆತಂತಾಗಿದೆ. ಅವರಿಗೆ ನಾನು ಸದಾ ಆಭಾರಿ’ ಎಂದು ಹೇಳಿದರು.</p>.<p><strong>ರಕ್ತದಾನ: ಪ್ಲಾಸ್ಮಾ ಮಾದರಿ ಸಂಗ್ರಹ</strong><br />‘185 ರೋಗಿಯ ಇಡೀ ಕುಟುಂಬ ನಡೆದುಕೊಂಡ ರೀತಿ ಸಮಾಜಕ್ಕೆ ಮಾದರಿಯಾಗಿದೆ. ಪ್ರಾಥಮಿಕ ಸಂಪರ್ಕಿತರು ಸೇರಿ 6 ಮಂದಿ ನೆಗೆಟಿವ್ ಆಗಿ ಮನೆಗೆ ಮರಳಿದ್ದಾರೆ. ಗುಣಮುಖರಾದ ವ್ಯಕ್ತಿಯ ರಕ್ತ ಮಾದರಿ ಸಂಗ್ರಹಿಸಲಾಗಿದೆ. ಗಂಭೀರ ಸ್ಥಿತಿ ತಲುಪುವ ಇಬ್ಬರು ರೋಗಿಗಳನ್ನುಪ್ಲಾಸ್ಮಾ ಕಣಗಳಿಂದ ಗುಣಪಡಿಸಬಹುದಾಗಿದೆ’ ಎಂದು ವೈದ್ಯರೂ ಆದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>