<p><strong>ಬೆಂಗಳೂರು</strong>: ವಿದೇಶಗಳಿಂದ ಕೋವಿಡ್ ಲಸಿಕೆ ಖರೀದಿಸಲು ಈಗಾಗಲೇ ಟೆಂಡರ್ ಕರೆದಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಹಣದಿಂದ ಲಸಿಕೆ ತರಿಸಲು ಉದ್ದೇಶಿಸಿದ್ದೇವೆ ಎಂದರು.</p>.<p>ಆಗ ಮಧ್ಯ ಪ್ರವೇಶಿಸಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಟೆಂಡರ್ ಕರೆದಿದ್ದೇವೆ, ಕೆಲವು ಕಂಪನಿಗಳು ಮುಂದಕ್ಕೆ ಬಂದಿವೆ. ಪ್ರಕ್ರಿಯೆ ಇನ್ನೂ ಅಂತಿಮಗೊಳಿಸಿಲ್ಲ ಎಂದು ಹೇಳಿದರು.</p>.<p>ಕೋವಿಡ್ ಪ್ರಕರಣಗಳು ಕಡಿಮೆ ಆಗುತ್ತಿವೆ. ಪರೀಕ್ಷೆ ಮಾಡಿದವರಲ್ಲಿ ಕೋವಿಡ್ ಲಕ್ಷಣ ಇರುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಇದಕ್ಕೆ ಸೂಚನೆ. ಪರೀಕ್ಷೆ ಸಂಖ್ಯೆಯನ್ನು ತಗ್ಗಿಸಿಲ್ಲ ಎಂದೂ ಹೇಳಿದರು.</p>.<p>ಕೋವಿಡ್ ಲಸಿಕೆಗಳನ್ನು ಇನ್ನು ಮುಂದೆ ಶಾಲೆಗಳು,ಸಮುದಾಯ ಭವನ ಮತ್ತು ಮೈದಾನಗಳು ಸೇರಿ ವಿವಿಧೆಡೆ ನೀಡಲು ವ್ಯವಸ್ಥೆ ಕಾರ್ಯಪಡೆ ಚಿಂತನೆ ನಡೆಸಿದೆ, ಕೋವಿಡ್ ಸೆಂಟರ್ಗಳನ್ನು ಹೋಬಳಿ ಮಟ್ಟದಲ್ಲೂ ಆರಂಭಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸುಧಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿದೇಶಗಳಿಂದ ಕೋವಿಡ್ ಲಸಿಕೆ ಖರೀದಿಸಲು ಈಗಾಗಲೇ ಟೆಂಡರ್ ಕರೆದಿದ್ದು, ಅದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಹಣದಿಂದ ಲಸಿಕೆ ತರಿಸಲು ಉದ್ದೇಶಿಸಿದ್ದೇವೆ ಎಂದರು.</p>.<p>ಆಗ ಮಧ್ಯ ಪ್ರವೇಶಿಸಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಟೆಂಡರ್ ಕರೆದಿದ್ದೇವೆ, ಕೆಲವು ಕಂಪನಿಗಳು ಮುಂದಕ್ಕೆ ಬಂದಿವೆ. ಪ್ರಕ್ರಿಯೆ ಇನ್ನೂ ಅಂತಿಮಗೊಳಿಸಿಲ್ಲ ಎಂದು ಹೇಳಿದರು.</p>.<p>ಕೋವಿಡ್ ಪ್ರಕರಣಗಳು ಕಡಿಮೆ ಆಗುತ್ತಿವೆ. ಪರೀಕ್ಷೆ ಮಾಡಿದವರಲ್ಲಿ ಕೋವಿಡ್ ಲಕ್ಷಣ ಇರುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಇದಕ್ಕೆ ಸೂಚನೆ. ಪರೀಕ್ಷೆ ಸಂಖ್ಯೆಯನ್ನು ತಗ್ಗಿಸಿಲ್ಲ ಎಂದೂ ಹೇಳಿದರು.</p>.<p>ಕೋವಿಡ್ ಲಸಿಕೆಗಳನ್ನು ಇನ್ನು ಮುಂದೆ ಶಾಲೆಗಳು,ಸಮುದಾಯ ಭವನ ಮತ್ತು ಮೈದಾನಗಳು ಸೇರಿ ವಿವಿಧೆಡೆ ನೀಡಲು ವ್ಯವಸ್ಥೆ ಕಾರ್ಯಪಡೆ ಚಿಂತನೆ ನಡೆಸಿದೆ, ಕೋವಿಡ್ ಸೆಂಟರ್ಗಳನ್ನು ಹೋಬಳಿ ಮಟ್ಟದಲ್ಲೂ ಆರಂಭಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸುಧಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>