ರೈತರು ತಮ್ಮ ಮನೆಗಳಿಂದ ಸಂಜೆ 7ರಿಂದ 8.30 ಗಂಟೆಗೆ ಹಾಗೂ ಬೆಳಿಗ್ಗೆ 6.30 ರಿಂದ 8 ಗಂಟೆವರೆಗೆ ಹಾಲು ತಂದು ಹಾಕುತ್ತಾರೆ ಜನರ ಸಹಕಾರ ಚನ್ನಾಗಿದೆ ಎಂಬುದು ಕಾರ್ಯದರ್ಶಿ ವೈಜನಾಥ ಕೊಠಾರ ಅವರ ವಿವರಣೆ. ಕೊರೊನಾ ಹರಡದಂತೆ ಏನು ಮಾಡಬೇಕೆಂಬುದು ತೋಚದೇ ಚಿಂತಿತರಾಗಿದ್ದೇವು. ದಿನಸಿ ಅಂಗಡಿಗಳ ಎದುರು ಬಾಕ್ಸ್ ಹಾಕಿರುವುದು ಮಾಧ್ಯಮಗಳಿಂದ ತಿಳಿದಿತ್ತು. ಅದರಂತೆ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆ ಎಂದರು.