<p><strong>ಬೆಂಗಳೂರು:</strong> ಆತಂಕಕಾರಿ ಕೋವಿಡ್–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>ಶಾಸಕರ ಕ್ಷೇತ್ರಾಭಿವೃದ್ಧಿ ಯೋಜನೆಯ ಪರಿಷ್ಕತ ಮಾರ್ಗಸೂಚಿ ಅನ್ವಯ ಪ್ರಕೃತಿ ವಿಕೋಪದಡಿ ಶಾಸಕರ ಸ್ಥಳೀಯ ಕ್ವೇತ್ರಾಭಿವೃದ್ಧಿ ಅನುದಾನ ಬಳಕೆ ಮಾಡಿಕೊಳ್ಳಲು ಅವಕಾಶವಿರುವುದರಿಂದ ಕೊರೊನಾ ವೈರಸ್ ತಡೆಯಲು 2020–21ನೇ ಸಾಲಿನಲ್ಲಿ ಮಾತ್ರ ಈ ಅನುದಾನ ಬಳಸಲು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಶಾಸಕರು ಬಯಸಿದರೆ ತಮ್ಮ ಅನುದಾನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.</p>.<p>ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಶಾಸಕರನ್ನು ಸಂಪರ್ಕಿಸಿ, ಅವರ ಪ್ರಸ್ತಾವನೆಗಳಿಗೆ ತುರ್ತು ಲಭ್ಯವಿರುವ ಪಿ.ಡಿ ಖಾತೆಯ ಹಣದಿಂದ ₹2 ಕೋಟಿಗೆ ಸೀಮಿತಗೊಳಿಸಿ ಬಳಸಲು ಕ್ರಮ ಕೈಗೊಳ್ಳಬಹುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.</p>.<p>2018–19ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರಿಗೆ ₹481.69 ಕೋಟಿ ಬಿಡುಗಡೆ ಆಗಿದೆ. 2019– 20ನೇ ಸಾಲಿನಲ್ಲಿ ₹ 299.67 ಕೋಟಿ ಇದೆ. ಅನೇಕ ಶಾಸಕರು ತಮ್ಮ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದ ಕಾರಣದಿಂದ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಹಣ ಉಳಿದಿದೆ.</p>.<p>ರಾಜ್ಯದ ಕೆಲವು ಸಂಸತ್ ಸದಸ್ಯರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನವನ್ನು ಪ್ರಧಾನ ಮಂತ್ರಿಗಳ ಪಿಎಂ ಕೇರ್ಸ್ ಗೆ<br />ದೇಣಿಗೆ ನೀಡಿದ್ದಾರೆ. ಸಂಸದರು ತಮ್ಮ ಅನುದಾನವನ್ನು ಮುಖ್ಯಮಂತ್ರಿಗಳ ನಿಧಿಗೆ ಕೊಡದೆ ಪಿಎಂ–ಕೇರ್ಸ್ಗೆ ನೀಡಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆತಂಕಕಾರಿ ಕೋವಿಡ್–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>ಶಾಸಕರ ಕ್ಷೇತ್ರಾಭಿವೃದ್ಧಿ ಯೋಜನೆಯ ಪರಿಷ್ಕತ ಮಾರ್ಗಸೂಚಿ ಅನ್ವಯ ಪ್ರಕೃತಿ ವಿಕೋಪದಡಿ ಶಾಸಕರ ಸ್ಥಳೀಯ ಕ್ವೇತ್ರಾಭಿವೃದ್ಧಿ ಅನುದಾನ ಬಳಕೆ ಮಾಡಿಕೊಳ್ಳಲು ಅವಕಾಶವಿರುವುದರಿಂದ ಕೊರೊನಾ ವೈರಸ್ ತಡೆಯಲು 2020–21ನೇ ಸಾಲಿನಲ್ಲಿ ಮಾತ್ರ ಈ ಅನುದಾನ ಬಳಸಲು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಶಾಸಕರು ಬಯಸಿದರೆ ತಮ್ಮ ಅನುದಾನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.</p>.<p>ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಶಾಸಕರನ್ನು ಸಂಪರ್ಕಿಸಿ, ಅವರ ಪ್ರಸ್ತಾವನೆಗಳಿಗೆ ತುರ್ತು ಲಭ್ಯವಿರುವ ಪಿ.ಡಿ ಖಾತೆಯ ಹಣದಿಂದ ₹2 ಕೋಟಿಗೆ ಸೀಮಿತಗೊಳಿಸಿ ಬಳಸಲು ಕ್ರಮ ಕೈಗೊಳ್ಳಬಹುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.</p>.<p>2018–19ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರಿಗೆ ₹481.69 ಕೋಟಿ ಬಿಡುಗಡೆ ಆಗಿದೆ. 2019– 20ನೇ ಸಾಲಿನಲ್ಲಿ ₹ 299.67 ಕೋಟಿ ಇದೆ. ಅನೇಕ ಶಾಸಕರು ತಮ್ಮ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದ ಕಾರಣದಿಂದ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಹಣ ಉಳಿದಿದೆ.</p>.<p>ರಾಜ್ಯದ ಕೆಲವು ಸಂಸತ್ ಸದಸ್ಯರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನವನ್ನು ಪ್ರಧಾನ ಮಂತ್ರಿಗಳ ಪಿಎಂ ಕೇರ್ಸ್ ಗೆ<br />ದೇಣಿಗೆ ನೀಡಿದ್ದಾರೆ. ಸಂಸದರು ತಮ್ಮ ಅನುದಾನವನ್ನು ಮುಖ್ಯಮಂತ್ರಿಗಳ ನಿಧಿಗೆ ಕೊಡದೆ ಪಿಎಂ–ಕೇರ್ಸ್ಗೆ ನೀಡಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>