<p><strong>ಮೈಸೂರು: </strong>ಕೊರೊನಾ ವೈರಸ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿರುವ ಮಧ್ಯೆಯೂ ಎಂದಿನಂತೆ ಸಾರ್ವಜನಿಕರು ಗುಂಪುಗೂಡಿ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಖರೀದಿ ಮಾಡುತ್ತಿದ್ದ ದೃಶ್ಯ ಶುಕ್ರವಾರ ಕಂಡು ಬಂತು.</p>.<p>ಈ ಮಾರುಕಟ್ಟೆಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ. ಗಿಡಗಂಟಿಗಳು ಬೆಳೆದಿದ್ದರಿಂದ ವ್ಯಾಪಾರ ಮಾಡಲು ಕಷ್ಟ ಎಂದು ವ್ಯಾಪಾರಿಗಳು ದೂರಿದರು. ಹಾಗಾಗಿ, ಜೆಸಿಬಿ ಯಂತ್ರಗಳ ಸಹಾಯದಿಂದ ಗಿಡಗಂಟಿಗಳನ್ನು ತೆರವು ಮಾಡಲಾಗುತ್ತಿದೆ. ಸಂಜೆ ಹೊತ್ತಿಗೆ ಈ ಕಾರ್ಯ ಮುಗಿಯಲಿದ್ದು, ಶನಿವಾರ ಸಂಪೂರ್ಣ ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಆದರೆ, ಬನ್ನೂರಿನಲ್ಲಿ ಸದಾ ಗಿಜಿಗುಡುತ್ತಿದ್ದ ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿ, ಕೆಲವೇ ಮಂದಿಯನ್ನು ಒಳಗೆ ಬಿಡಲಾಗುತ್ತಿದೆ.</p>.<p>ನಗರದಲ್ಲಿ ರಸ್ತೆಬದಿ ತಂಗಿದ್ದ ಸುಮಾರು ನೂರಕ್ಕೂ ಅಧಿಕ ಮಂದಿಯನ್ನು ಇಲ್ಲಿನ ಯೂತ್ ಹಾಸ್ಟೆಲ್ಗೆ ಪಾಲಿಕೆ ರವಾನಿಸುತ್ತಿದೆ. 120 ಮಂದಿಗೆ ಇಲ್ಲಿ ಅವಕಾಶ ಇದ್ದು, ಇನ್ನುಳಿದವರನ್ನು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ಇರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೊರೊನಾ ವೈರಸ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿರುವ ಮಧ್ಯೆಯೂ ಎಂದಿನಂತೆ ಸಾರ್ವಜನಿಕರು ಗುಂಪುಗೂಡಿ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಖರೀದಿ ಮಾಡುತ್ತಿದ್ದ ದೃಶ್ಯ ಶುಕ್ರವಾರ ಕಂಡು ಬಂತು.</p>.<p>ಈ ಮಾರುಕಟ್ಟೆಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ. ಗಿಡಗಂಟಿಗಳು ಬೆಳೆದಿದ್ದರಿಂದ ವ್ಯಾಪಾರ ಮಾಡಲು ಕಷ್ಟ ಎಂದು ವ್ಯಾಪಾರಿಗಳು ದೂರಿದರು. ಹಾಗಾಗಿ, ಜೆಸಿಬಿ ಯಂತ್ರಗಳ ಸಹಾಯದಿಂದ ಗಿಡಗಂಟಿಗಳನ್ನು ತೆರವು ಮಾಡಲಾಗುತ್ತಿದೆ. ಸಂಜೆ ಹೊತ್ತಿಗೆ ಈ ಕಾರ್ಯ ಮುಗಿಯಲಿದ್ದು, ಶನಿವಾರ ಸಂಪೂರ್ಣ ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಆದರೆ, ಬನ್ನೂರಿನಲ್ಲಿ ಸದಾ ಗಿಜಿಗುಡುತ್ತಿದ್ದ ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿ, ಕೆಲವೇ ಮಂದಿಯನ್ನು ಒಳಗೆ ಬಿಡಲಾಗುತ್ತಿದೆ.</p>.<p>ನಗರದಲ್ಲಿ ರಸ್ತೆಬದಿ ತಂಗಿದ್ದ ಸುಮಾರು ನೂರಕ್ಕೂ ಅಧಿಕ ಮಂದಿಯನ್ನು ಇಲ್ಲಿನ ಯೂತ್ ಹಾಸ್ಟೆಲ್ಗೆ ಪಾಲಿಕೆ ರವಾನಿಸುತ್ತಿದೆ. 120 ಮಂದಿಗೆ ಇಲ್ಲಿ ಅವಕಾಶ ಇದ್ದು, ಇನ್ನುಳಿದವರನ್ನು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ಇರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>