<p><strong>ಬೆಂಗಳೂರು:</strong> ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 9,058 ಮಂದಿ ಕೋವಿಡ್ ಪೀಡಿತರಾಗಿರುವುದು ಮಂಗಳವಾರ ದೃಢಪಟ್ಟಿದೆ. ಎರಡನೇ ಬಾರಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3.51 ಲಕ್ಷಕ್ಕೆ ಏರಿಕೆಯಾಗಿದೆ.</p>.<p>ಒಂದೇ ದಿನ 51,987 ಆ್ಯಂಟಿಜೆನ್ ಸೇರಿದಂತೆ 83,670 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿವೆ. ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದು, ರಾಜ್ಯದಲ್ಲಿ ಕಳೆದ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ 1.24 ಲಕ್ಷ ತಲುಪಿತ್ತು. ಅದಾದ ಒಂದೇ ತಿಂಗಳಲ್ಲಿ 2.27 ಲಕ್ಷ ಪ್ರಕರಣ<br />ಗಳು ವರದಿಯಾಗಿವೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 11.82ರಷ್ಟಿದೆ.</p>.<p>ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 50 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಈವರೆಗೆ 29.79 ಲಕ್ಷ ಮಂದಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ವರದಿಯಾದ ಹಾಗೂ ಗುಣಮುಖರನ್ನು ಒಳಗೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.</p>.<p class="Subhead">135 ಮಂದಿ ಸಾವು: ಕೊರೊನಾ ಸೋಂಕಿತರಲ್ಲಿ ಮತ್ತೆ 135 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 28 ಮಂದಿ 50 ವರ್ಷದೊಳಗಿನವರಾಗಿದ್ದಾರೆ. ಕೋವಿಡ್ಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 5,837ಕ್ಕೆ ತಲುಪಿದೆ. ಬೆಂಗಳೂರಿ<br />ನಲ್ಲಿ ಮತ್ತೆ 40 ಮಂದಿ ಮರಣ ಹೊಂದಿರುವುದು ದೃಢಪಟ್ಟಿದ್ದು, ಮೃತಪಟ್ಟವರಒಟ್ಟು ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಮೈಸೂರು (12), ಶಿವಮೊಗ್ಗದಲ್ಲಿಯೂ (10) ಅಧಿಕ ಮಂದಿ ಮಂಗಳವಾರ ಸಾವಿಗೀಡಾಗಿರುವುದು ಖಚಿತಪಟ್ಟಿದೆ.</p>.<p>ಬೆಂಗಳೂರಿನಲ್ಲಿ 1,137 ಮಂದಿ ಸೇರಿದಂತೆ ರಾಜ್ಯದಲ್ಲಿ 5,159 ಮಂದಿಗೆ ಕೋವಿಡ್ ವಾಸಿಯಾಗಿದ್ದು, ಆಸ್ಪತ್ರೆ<br />ಯಿಂದ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 2.54 ಲಕ್ಷದಾಟಿದೆ. 90 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ2,967 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.32 ಲಕ್ಷದಾಟಿದೆ. ಮೈಸೂರಿನಲ್ಲಿ ಮತ್ತೆ 737 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಸೋಂಕಿತರ ಸಂಖ್ಯೆ 18 ಸಾವಿರ ದಾಟಿದೆ. ಹಾಸನ (461), ಬಳ್ಳಾರಿ (393), ದಕ್ಷಿಣ ಕನ್ನಡ (352), ತುಮಕೂರು (327), ಬೆಳಗಾವಿ (316)ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 9,058 ಮಂದಿ ಕೋವಿಡ್ ಪೀಡಿತರಾಗಿರುವುದು ಮಂಗಳವಾರ ದೃಢಪಟ್ಟಿದೆ. ಎರಡನೇ ಬಾರಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3.51 ಲಕ್ಷಕ್ಕೆ ಏರಿಕೆಯಾಗಿದೆ.</p>.<p>ಒಂದೇ ದಿನ 51,987 ಆ್ಯಂಟಿಜೆನ್ ಸೇರಿದಂತೆ 83,670 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿವೆ. ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದು, ರಾಜ್ಯದಲ್ಲಿ ಕಳೆದ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ 1.24 ಲಕ್ಷ ತಲುಪಿತ್ತು. ಅದಾದ ಒಂದೇ ತಿಂಗಳಲ್ಲಿ 2.27 ಲಕ್ಷ ಪ್ರಕರಣ<br />ಗಳು ವರದಿಯಾಗಿವೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 11.82ರಷ್ಟಿದೆ.</p>.<p>ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 50 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಈವರೆಗೆ 29.79 ಲಕ್ಷ ಮಂದಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ವರದಿಯಾದ ಹಾಗೂ ಗುಣಮುಖರನ್ನು ಒಳಗೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.</p>.<p class="Subhead">135 ಮಂದಿ ಸಾವು: ಕೊರೊನಾ ಸೋಂಕಿತರಲ್ಲಿ ಮತ್ತೆ 135 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 28 ಮಂದಿ 50 ವರ್ಷದೊಳಗಿನವರಾಗಿದ್ದಾರೆ. ಕೋವಿಡ್ಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 5,837ಕ್ಕೆ ತಲುಪಿದೆ. ಬೆಂಗಳೂರಿ<br />ನಲ್ಲಿ ಮತ್ತೆ 40 ಮಂದಿ ಮರಣ ಹೊಂದಿರುವುದು ದೃಢಪಟ್ಟಿದ್ದು, ಮೃತಪಟ್ಟವರಒಟ್ಟು ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಮೈಸೂರು (12), ಶಿವಮೊಗ್ಗದಲ್ಲಿಯೂ (10) ಅಧಿಕ ಮಂದಿ ಮಂಗಳವಾರ ಸಾವಿಗೀಡಾಗಿರುವುದು ಖಚಿತಪಟ್ಟಿದೆ.</p>.<p>ಬೆಂಗಳೂರಿನಲ್ಲಿ 1,137 ಮಂದಿ ಸೇರಿದಂತೆ ರಾಜ್ಯದಲ್ಲಿ 5,159 ಮಂದಿಗೆ ಕೋವಿಡ್ ವಾಸಿಯಾಗಿದ್ದು, ಆಸ್ಪತ್ರೆ<br />ಯಿಂದ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 2.54 ಲಕ್ಷದಾಟಿದೆ. 90 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ2,967 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.32 ಲಕ್ಷದಾಟಿದೆ. ಮೈಸೂರಿನಲ್ಲಿ ಮತ್ತೆ 737 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಸೋಂಕಿತರ ಸಂಖ್ಯೆ 18 ಸಾವಿರ ದಾಟಿದೆ. ಹಾಸನ (461), ಬಳ್ಳಾರಿ (393), ದಕ್ಷಿಣ ಕನ್ನಡ (352), ತುಮಕೂರು (327), ಬೆಳಗಾವಿ (316)ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>