ಬೆಂಗಳೂರು: ರಾಜ್ಯದಲ್ಲಿ ಸೋಮವಾರ2,738 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 73 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ಬೆಂಗಳೂರಿನಲ್ಲಿ ಒಂದೇ ದಿನ 1,315 ಹೊಸ ಪ್ರಕರಣಗಳು ವರದಿಯಾಗಿದ್ದು, 47 ಮಂದಿ ಮೃತಪಟ್ಟಿದ್ದಾರೆ. ಒಟ್ಟು 838 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಂದೇ ದಿನ 17,171 ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆ 8.39 ಲಕ್ಷ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ 1.82 ಇದೆ ಎಮದು ಸಚಿವರು ಹೇಳಿದರು.