<p><strong>ಬೀದರ್: </strong>ದುಬೈನಿಂದ ಮುಂಬೈಗೆ ಬಂದು ಅಲ್ಲಿಂದ ಖಾಸಗಿ ಬಸ್ನಲ್ಲಿ ಕರ್ನಾಟಕ ಮಾರ್ಗವಾಗಿ ತೆಲಂಗಾಣಕ್ಕೆ ಹೊರಟ್ಟಿದ 60 ಜನರನ್ನು ಔರಾದ್ ಪೊಲೀಸರು ತಡೆದು ತೆಲಂಗಾಣ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಖಾಸಗಿ ವಾಹನ ಔರಾದ್ ತಾಲ್ಲೂಕಿನ ಜಮಗಿ ಗ್ರಾಮದ ಬಳಿ ಬಂದಾಗ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಬಸ್ನಲ್ಲಿರುವ ಪ್ರಯಾಣಿಕರ ತಪಾಸಣೆ ನಡೆಸಿದಾಗ ಎಲ್ಲ 60 ಜನರ ಕೈಗಳ ಮೇಲೆ ಶಾಹಿಗುರುತು ಹಾಕಿರುವುದು ಕಂಡು ಬಂದಿತು.</p>.<p>ಔರಾದ್ ಪೊಲೀಸರು ಮೇದಕ್ ಜಿಲ್ಲೆಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಬಸ್ ಅನ್ನು ವಶಕ್ಕೆ ತೆಗೆದುಕೊಂಡರು.</p>.<p>ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ತೆಲಂಗಾಣದನಿಜಾಮಾಬಾದ್ ಆಸ್ಪತ್ರೆಯ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.</p>.<p>ಈ ಘಟನೆಯ ನಂತರ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಕಮಲನಗರ, ಭಾಲ್ಕಿ, ಬಸವಕಲ್ಯಾಣ ಹಾಗೂ ತೆಲಂಗಾಣಕ್ಕೆ ಹೊಂದಿಕೊಂಡಿರುವ ಔರಾದ್, ಬೀದರ್ ತಾಲ್ಲೂಕಿನ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.</p>.<p><strong>ಹೈದರಾಬಾದ್ನ ರೈಲುಗಾಡಿಗಳು ಬೀದರ್ನಲ್ಲಿ ನಿಲುಗಡೆ: </strong>ದೇಶದೆಲ್ಲಡೆ ರೈಲು ಸಂಚಾರ ಸ್ಥಗಿತಗೊಳಿಸುವ ಕಾರಣ ಹೈದರಾಬಾದ್ ಹಾಗೂ ಸಿಕಂದರಾಬಾದ್ನಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಬೀದರ್ ರೈಲು ನಿಲ್ದಾಣ ಹಾಗೂ ಭಾಲ್ಕಿ ತಾಲ್ಲೂಕಿನ ಖಾನಾಪುರ ಜಂಕ್ಷನ್ಲ್ಲಿ ಒಟ್ಟು ನಾಲ್ಕು ರೈಲುಗಳನ್ನು ನಿಲುಗಡೆ ಮಾಡಲಾಗಿದೆ.</p>.<p><strong>ಲಾಠಿ ರುಚಿ ತೋರಿಸಿದ ಪೊಲೀಸರು:</strong>ಜಿಲ್ಲೆಯಲ್ಲಿ ಮಾರ್ಚ್ 31ರ ವರೆಗೆ ಕಠಿಣ ನಿರ್ಬಂಧ ಹೇರಿದರೂ ಬೀದರ್ನಲ್ಲಿ ಬೆಳಿಗ್ಗೆ ದ್ವಿಚಕ್ರವಾಹನ ಮೇಲೆ ಓಡಾಡಲು ಆರಂಭಿಸಿದ ಕೆಲ ಯುವಕರಿಗೆ ಪೊಲೀಸರು ಬೆತ್ತದ ರುಚಿ ತೋರಿಸಿದರು. ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ಹೊರಟಿದ್ದವರಿಗೆ ಅನುವು ಮಾಡಿಕೊಟ್ಟರು.</p>.<p>ಕೇಂದ್ರ ಬಸ್ ನಿಲ್ದಾಣ, ಓಲ್ಡ್ಸಿಟಿ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ನೌಬಾದ್ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ದುಬೈನಿಂದ ಮುಂಬೈಗೆ ಬಂದು ಅಲ್ಲಿಂದ ಖಾಸಗಿ ಬಸ್ನಲ್ಲಿ ಕರ್ನಾಟಕ ಮಾರ್ಗವಾಗಿ ತೆಲಂಗಾಣಕ್ಕೆ ಹೊರಟ್ಟಿದ 60 ಜನರನ್ನು ಔರಾದ್ ಪೊಲೀಸರು ತಡೆದು ತೆಲಂಗಾಣ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಖಾಸಗಿ ವಾಹನ ಔರಾದ್ ತಾಲ್ಲೂಕಿನ ಜಮಗಿ ಗ್ರಾಮದ ಬಳಿ ಬಂದಾಗ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಬಸ್ನಲ್ಲಿರುವ ಪ್ರಯಾಣಿಕರ ತಪಾಸಣೆ ನಡೆಸಿದಾಗ ಎಲ್ಲ 60 ಜನರ ಕೈಗಳ ಮೇಲೆ ಶಾಹಿಗುರುತು ಹಾಕಿರುವುದು ಕಂಡು ಬಂದಿತು.</p>.<p>ಔರಾದ್ ಪೊಲೀಸರು ಮೇದಕ್ ಜಿಲ್ಲೆಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಬಸ್ ಅನ್ನು ವಶಕ್ಕೆ ತೆಗೆದುಕೊಂಡರು.</p>.<p>ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ತೆಲಂಗಾಣದನಿಜಾಮಾಬಾದ್ ಆಸ್ಪತ್ರೆಯ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.</p>.<p>ಈ ಘಟನೆಯ ನಂತರ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಕಮಲನಗರ, ಭಾಲ್ಕಿ, ಬಸವಕಲ್ಯಾಣ ಹಾಗೂ ತೆಲಂಗಾಣಕ್ಕೆ ಹೊಂದಿಕೊಂಡಿರುವ ಔರಾದ್, ಬೀದರ್ ತಾಲ್ಲೂಕಿನ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.</p>.<p><strong>ಹೈದರಾಬಾದ್ನ ರೈಲುಗಾಡಿಗಳು ಬೀದರ್ನಲ್ಲಿ ನಿಲುಗಡೆ: </strong>ದೇಶದೆಲ್ಲಡೆ ರೈಲು ಸಂಚಾರ ಸ್ಥಗಿತಗೊಳಿಸುವ ಕಾರಣ ಹೈದರಾಬಾದ್ ಹಾಗೂ ಸಿಕಂದರಾಬಾದ್ನಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಬೀದರ್ ರೈಲು ನಿಲ್ದಾಣ ಹಾಗೂ ಭಾಲ್ಕಿ ತಾಲ್ಲೂಕಿನ ಖಾನಾಪುರ ಜಂಕ್ಷನ್ಲ್ಲಿ ಒಟ್ಟು ನಾಲ್ಕು ರೈಲುಗಳನ್ನು ನಿಲುಗಡೆ ಮಾಡಲಾಗಿದೆ.</p>.<p><strong>ಲಾಠಿ ರುಚಿ ತೋರಿಸಿದ ಪೊಲೀಸರು:</strong>ಜಿಲ್ಲೆಯಲ್ಲಿ ಮಾರ್ಚ್ 31ರ ವರೆಗೆ ಕಠಿಣ ನಿರ್ಬಂಧ ಹೇರಿದರೂ ಬೀದರ್ನಲ್ಲಿ ಬೆಳಿಗ್ಗೆ ದ್ವಿಚಕ್ರವಾಹನ ಮೇಲೆ ಓಡಾಡಲು ಆರಂಭಿಸಿದ ಕೆಲ ಯುವಕರಿಗೆ ಪೊಲೀಸರು ಬೆತ್ತದ ರುಚಿ ತೋರಿಸಿದರು. ತುರ್ತು ಚಿಕಿತ್ಸೆಗೆ ಆಸ್ಪತ್ರೆಗೆ ಹೊರಟಿದ್ದವರಿಗೆ ಅನುವು ಮಾಡಿಕೊಟ್ಟರು.</p>.<p>ಕೇಂದ್ರ ಬಸ್ ನಿಲ್ದಾಣ, ಓಲ್ಡ್ಸಿಟಿ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ನೌಬಾದ್ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>