<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಸ್. ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. </p>.<p>ರವಿಕುಮಾರ್ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಂದ ಶೇ 60ರಷ್ಟು ಲಂಚ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ’ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಆರೋಪಿಸಿದ್ದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರವಿಕುಮಾರ್ ಅವರು ಭೋವಿ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಸಮುದಾಯದ ಜನರ ಅಭಿವೃದ್ಧಿಗೆ ಇರುವ ಯೋಜನೆಗಳನ್ನು ಹಂಚಿಕೆ ಮಾಡಲು ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಜವಾಬ್ದಾರಿಯುತ ಹುದ್ದೆಯಲ್ಲಿರುವ ಇವರು ಫಲಾನುಭವಿಗಳಿಂದ ಲಂಚ ಪಡೆದುಕೊಳ್ಳುತ್ತಿರುವುದು ಖಂಡನೀಯ’ ಎಂದು ಹೇಳಿದ್ದರು. </p>.<p>‘ರವಿಕುಮಾರ್ ಅವರು ನಿಗಮದಲ್ಲಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವುದನ್ನು ಬಿಟ್ಟು, ಮಧ್ಯವರ್ತಿಗಳ ಮೂಲಕ ಹಣ ನೀಡುವಂತೆ ಫಲಾನುಭವಿಗಳಿಗೆ ಪೀಡಿಸುತ್ತಿದ್ದಾರೆ. ಈ ಬಗ್ಗೆ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊಗಳು ನನ್ನ ಬಳಿ ಇವೆ. ಕೂಡಲೇ ರವಿಕುಮಾರ್ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು. ಅವರ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೊ ಮತ್ತು ಆಡಿಯೊ ಹರಿದಾಡಿದವು.</p>.<div><blockquote>ಭೋವಿ ಅಭಿವೃದ್ಧಿ ನಿಗಮದಲ್ಲಿ ಶೇ 60 ಕಮೀಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪ ಮಾಡಿದವರು ದಾಖಲೆಗಳನ್ನು ಸಲ್ಲಿಸಲಿ, ಸರ್ಕಾರ ತನಿಖೆ ಮಾಡುತ್ತದೆ. </blockquote><span class="attribution">–ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ</span></div>.<div><blockquote>ಭೂಮಿ ಮಂಜೂರಾದವರಿಗೆ ₹25 ಲಕ್ಷ ಸಹಾಯಧನ ಬಿಡುಗಡೆ ಮಾಡಲು ₹5 ಲಕ್ಷ ಕಮಿಷನ್ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. </blockquote><span class="attribution">–ನಿಖಿಲ್ ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಸ್. ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. </p>.<p>ರವಿಕುಮಾರ್ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಂದ ಶೇ 60ರಷ್ಟು ಲಂಚ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ’ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಆರೋಪಿಸಿದ್ದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರವಿಕುಮಾರ್ ಅವರು ಭೋವಿ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಸಮುದಾಯದ ಜನರ ಅಭಿವೃದ್ಧಿಗೆ ಇರುವ ಯೋಜನೆಗಳನ್ನು ಹಂಚಿಕೆ ಮಾಡಲು ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಜವಾಬ್ದಾರಿಯುತ ಹುದ್ದೆಯಲ್ಲಿರುವ ಇವರು ಫಲಾನುಭವಿಗಳಿಂದ ಲಂಚ ಪಡೆದುಕೊಳ್ಳುತ್ತಿರುವುದು ಖಂಡನೀಯ’ ಎಂದು ಹೇಳಿದ್ದರು. </p>.<p>‘ರವಿಕುಮಾರ್ ಅವರು ನಿಗಮದಲ್ಲಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವುದನ್ನು ಬಿಟ್ಟು, ಮಧ್ಯವರ್ತಿಗಳ ಮೂಲಕ ಹಣ ನೀಡುವಂತೆ ಫಲಾನುಭವಿಗಳಿಗೆ ಪೀಡಿಸುತ್ತಿದ್ದಾರೆ. ಈ ಬಗ್ಗೆ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊಗಳು ನನ್ನ ಬಳಿ ಇವೆ. ಕೂಡಲೇ ರವಿಕುಮಾರ್ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು. ಅವರ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೊ ಮತ್ತು ಆಡಿಯೊ ಹರಿದಾಡಿದವು.</p>.<div><blockquote>ಭೋವಿ ಅಭಿವೃದ್ಧಿ ನಿಗಮದಲ್ಲಿ ಶೇ 60 ಕಮೀಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪ ಮಾಡಿದವರು ದಾಖಲೆಗಳನ್ನು ಸಲ್ಲಿಸಲಿ, ಸರ್ಕಾರ ತನಿಖೆ ಮಾಡುತ್ತದೆ. </blockquote><span class="attribution">–ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ</span></div>.<div><blockquote>ಭೂಮಿ ಮಂಜೂರಾದವರಿಗೆ ₹25 ಲಕ್ಷ ಸಹಾಯಧನ ಬಿಡುಗಡೆ ಮಾಡಲು ₹5 ಲಕ್ಷ ಕಮಿಷನ್ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. </blockquote><span class="attribution">–ನಿಖಿಲ್ ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>