<p><strong>ಬೆಂಗಳೂರು</strong>: ‘ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕಾಗುತ್ತದೆ. ಹೀಗಾಗಿಯೇ ಅವರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಭ್ರಷ್ಟಾಚಾರದ ಬ್ರಹ್ಮ ಯಾರು ಎಂಬುದು ಎಲ್ಲರಿಗೂ ಗೊತ್ತಾಗಿದೆ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.</p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಬಳಕೆಯಾಗಿದೆ. ಆ ಹಣದಲ್ಲಿ ಮದ್ಯ ಖರೀದಿಸಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ತಾವು ಎಲ್ಲಿ ಸಿಲುಕಿಕೊಳ್ಳುತ್ತೀವೋ ಎಂಬ ಭಯದಲ್ಲಿ ಬಿಜೆಪಿ ಅವಧಿಯಲ್ಲಿ 21 ಹಗರಣ ಆಗಿದೆ ಎನ್ನುತ್ತಿದ್ದಾರೆ. ಅವುಗಳಿಗೆ ದಾಖಲೆಗಳನ್ನು ನೀಡಬೇಕಿತ್ತು’ ಎಂದರು.</p>.<p>‘ಎಲ್ಲ ಇಲಾಖೆಗಳಲ್ಲೂ ನಡೆದಿರುವ ಹಗರಣಗಳು ಹೊರಬರುತ್ತಿವೆ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಎನ್ನುವಂತಾಗಿದೆ. ತಮ್ಮ ವಿರುದ್ಧ ಬಂದಿರುವ ಆರೋಪಗಳಿಂದ ರಕ್ಷಣೆ ಪಡೆಯಲು ಪೊಲೀಸ್ ಇಲಾಖೆಯನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಹಗರಣವೂ ಶೀಘ್ರ ಹೊರಗೆ ಬರಲಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ದದ ಹೋರಾಟ ಸದನದ ಹೊರಗೆ ಹಾಗೂ ಒಳಗೆ ಮುಂದುವರೆಯಲಿದೆ’ ಎಂದು ಹೇಳಿದರು.</p>.<p><strong>ಪ್ರವಾಹ ನಿರ್ಲಕ್ಷ್ಯ</strong>: ‘ಬರ ಮತ್ತು ಪ್ರವಾಹದ ವಿಚಾರದಲ್ಲಿ ಈ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ನಮ್ಮ ಕೇಂದ್ರ ಸಚಿವರು, ಪಕ್ಷದ ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ನಂತರ ಸಿಎಂ ಭೇಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ ₹700 ಕೋಟಿ ನೀಡಿದೆ. ಬರ ಬಂದಾಗಲೂ ಇವರು ಹಣ ಬಿಡುಗಡೆ ಮಾಡಲಿಲ್ಲ. ಈಗಲೂ ಬಿಡುಗಡೆ ಮಾಡಿಲ್ಲ. ಈ ಸರ್ಕಾರಕ್ಕೆ ಒಳ್ಳೆಯ ಆಡಳಿತ ಕೊಡುವ ಉದ್ದೇಶ ಇಲ್ಲ’ ಎಂದು ಬೊಮ್ಮಾಯಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕಾಗುತ್ತದೆ. ಹೀಗಾಗಿಯೇ ಅವರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಭ್ರಷ್ಟಾಚಾರದ ಬ್ರಹ್ಮ ಯಾರು ಎಂಬುದು ಎಲ್ಲರಿಗೂ ಗೊತ್ತಾಗಿದೆ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.</p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಬಳಕೆಯಾಗಿದೆ. ಆ ಹಣದಲ್ಲಿ ಮದ್ಯ ಖರೀದಿಸಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ತಾವು ಎಲ್ಲಿ ಸಿಲುಕಿಕೊಳ್ಳುತ್ತೀವೋ ಎಂಬ ಭಯದಲ್ಲಿ ಬಿಜೆಪಿ ಅವಧಿಯಲ್ಲಿ 21 ಹಗರಣ ಆಗಿದೆ ಎನ್ನುತ್ತಿದ್ದಾರೆ. ಅವುಗಳಿಗೆ ದಾಖಲೆಗಳನ್ನು ನೀಡಬೇಕಿತ್ತು’ ಎಂದರು.</p>.<p>‘ಎಲ್ಲ ಇಲಾಖೆಗಳಲ್ಲೂ ನಡೆದಿರುವ ಹಗರಣಗಳು ಹೊರಬರುತ್ತಿವೆ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಎನ್ನುವಂತಾಗಿದೆ. ತಮ್ಮ ವಿರುದ್ಧ ಬಂದಿರುವ ಆರೋಪಗಳಿಂದ ರಕ್ಷಣೆ ಪಡೆಯಲು ಪೊಲೀಸ್ ಇಲಾಖೆಯನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಹಗರಣವೂ ಶೀಘ್ರ ಹೊರಗೆ ಬರಲಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ದದ ಹೋರಾಟ ಸದನದ ಹೊರಗೆ ಹಾಗೂ ಒಳಗೆ ಮುಂದುವರೆಯಲಿದೆ’ ಎಂದು ಹೇಳಿದರು.</p>.<p><strong>ಪ್ರವಾಹ ನಿರ್ಲಕ್ಷ್ಯ</strong>: ‘ಬರ ಮತ್ತು ಪ್ರವಾಹದ ವಿಚಾರದಲ್ಲಿ ಈ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ನಮ್ಮ ಕೇಂದ್ರ ಸಚಿವರು, ಪಕ್ಷದ ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ನಂತರ ಸಿಎಂ ಭೇಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ ₹700 ಕೋಟಿ ನೀಡಿದೆ. ಬರ ಬಂದಾಗಲೂ ಇವರು ಹಣ ಬಿಡುಗಡೆ ಮಾಡಲಿಲ್ಲ. ಈಗಲೂ ಬಿಡುಗಡೆ ಮಾಡಿಲ್ಲ. ಈ ಸರ್ಕಾರಕ್ಕೆ ಒಳ್ಳೆಯ ಆಡಳಿತ ಕೊಡುವ ಉದ್ದೇಶ ಇಲ್ಲ’ ಎಂದು ಬೊಮ್ಮಾಯಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>