ಬೆಂಗಳೂರು: ಆಸ್ತಿಯೊಂದರ ಭೂಮಾಪನ ನಡೆಸಿ, ಗಡಿ ಗುರುತಿಸಲು ₹ 70 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ₹ 20 ಲಕ್ಷ ಪಡೆದಿರುವ ಆರೋಪದ ಮೇಲೆ ಭೂಮಾಪನ ಇಲಾಖೆಯ ಅಧಿಕಾರಿಗಳು ಸೇರಿ ನಾಲ್ವರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿದ್ದಾರೆ. ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.