ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ಆರೋಪದ ಬಗ್ಗೆ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಏನು ವಿಚಾರಣೆ ಮಾಡಲು ಸಾಧ್ಯ? ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಚಾರಣೆ ನಡೆಸಬೇಕು ಎಂಬ ನಮ್ಮ ಬೇಡಿಕೆಯನ್ನು ಒಪ್ಪಲು ಸರ್ಕಾರ ಸಿದ್ಧವಿಲ್ಲ. ಹೀಗಾಗಿ, ಸದನ ಸಮಿತಿಯಿಂದ ತನಿಖೆ ಮಾಡಿಸಲಿ. ಯಾರು, ಯಾರು, ಏನುಮಾಡಿದ್ದಾರೆ ಎನ್ನುವುದು ಬಹಿರಂಗ ಆಗಲಿ’ ಎಂದು ಆಗ್ರಹಿಸಿದರು.