<p><strong>ಬೆಂಗಳೂರು</strong>: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಶಿಫಾರಸು ಮಾಡಲಿ ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಅಗತ್ಯವಿದ್ದರೆ ನನ್ನ ಅವಧಿಯದ್ದೂ ಸೇರಿಸಿ ತನಿಖೆ ಮಾಡಿಸಲಿ’ ಎಂದು ಹೇಳಿದರು.</p>.<p>‘ಖಾದರ್ ಅವರ ಆಡಳಿತ ಸುಧಾರಣೆಯ ಭಾಗವಾಗಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ ನಡೆದಿದೆ. ಆದ್ದರಿಂದ, ನ್ಯಾಯಾಂಗ ತನಿಖೆ ನಡೆಸುವುದು ಸೂಕ್ತ. ಸಭಾಧ್ಯಕ್ಷರ ಹುದ್ದೆ ಸಾಂವಿಧಾನಿಕ ಹುದ್ದೆ. ಅದಕ್ಕೆ ಘನತೆ– ಗೌರವ ಇದೆ. ಆರೋಪ ಬಂದಾಗ ತನಿಖೆಗೆ ಆದೇಶಿಸಬೇಕು, ಆರೋಪಗಳಿಂದ ಕಳಂಕ ಮುಕ್ತರಾಗಿ ಹೊರಬರಬೇಕು’ ಎಂದು ಕಾಗೇರಿ ಹೇಳಿದರು.</p>.<p>‘ಕಾಗೇರಿ ಅವರು ಮಾಡಿರುವ ಆರೋಪ ಮಾಜಿ ಸಭಾಧ್ಯಕ್ಷರಿಗೆ ಮಾಡಿರುವ ಅಪಮಾನ’ ಎಂದು ಖಾದರ್ ಅವರು ನೀಡಿದ ಹೇಳಿಕೆ ಪ್ರತಿಕ್ರಿಯಿಸಿದ ಕಾಗೇರಿ, ‘ಅಭಿಪ್ರಾಯ ಹೇಳುವುದಕ್ಕೆ ನಮಗೆ ಸ್ವಾತಂತ್ರ್ಯವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಶಿಫಾರಸು ಮಾಡಲಿ ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಅಗತ್ಯವಿದ್ದರೆ ನನ್ನ ಅವಧಿಯದ್ದೂ ಸೇರಿಸಿ ತನಿಖೆ ಮಾಡಿಸಲಿ’ ಎಂದು ಹೇಳಿದರು.</p>.<p>‘ಖಾದರ್ ಅವರ ಆಡಳಿತ ಸುಧಾರಣೆಯ ಭಾಗವಾಗಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ ನಡೆದಿದೆ. ಆದ್ದರಿಂದ, ನ್ಯಾಯಾಂಗ ತನಿಖೆ ನಡೆಸುವುದು ಸೂಕ್ತ. ಸಭಾಧ್ಯಕ್ಷರ ಹುದ್ದೆ ಸಾಂವಿಧಾನಿಕ ಹುದ್ದೆ. ಅದಕ್ಕೆ ಘನತೆ– ಗೌರವ ಇದೆ. ಆರೋಪ ಬಂದಾಗ ತನಿಖೆಗೆ ಆದೇಶಿಸಬೇಕು, ಆರೋಪಗಳಿಂದ ಕಳಂಕ ಮುಕ್ತರಾಗಿ ಹೊರಬರಬೇಕು’ ಎಂದು ಕಾಗೇರಿ ಹೇಳಿದರು.</p>.<p>‘ಕಾಗೇರಿ ಅವರು ಮಾಡಿರುವ ಆರೋಪ ಮಾಜಿ ಸಭಾಧ್ಯಕ್ಷರಿಗೆ ಮಾಡಿರುವ ಅಪಮಾನ’ ಎಂದು ಖಾದರ್ ಅವರು ನೀಡಿದ ಹೇಳಿಕೆ ಪ್ರತಿಕ್ರಿಯಿಸಿದ ಕಾಗೇರಿ, ‘ಅಭಿಪ್ರಾಯ ಹೇಳುವುದಕ್ಕೆ ನಮಗೆ ಸ್ವಾತಂತ್ರ್ಯವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>