<p>ಪ್ರಜಾವಾಣಿ ವಾರ್ತೆ</p>.<p>ಹಾಸನ: ‘ರಾಜ್ಯದಲ್ಲಿ ಮಾರಾಟ ಆಗುತ್ತಿರುವ ಕೆಮ್ಮಿನ ಸಿರಪ್ನ ಗುಣಮಟ್ಟ ಕಳಪೆ ಆಗಿರುವುದರ ಮಾಹಿತಿ ಬಂದಿದ್ದು, ತಪಾಸಣೆಗೆ ಮಾದರಿಯನ್ನು ಕಳುಹಿಸಲಾಗಿದೆ. ಇಲಾಖೆ ಅಗತ್ಯ ಎಚ್ಚರಿಕೆ ವಹಿಸಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಮ್ಮಿನ ಸಿರಪ್ ಕುರಿತು ಸಾರ್ವಜನಿಕರು ವಹಿಸಬೇಕಾದ ಜಾಗ್ರತೆ ಕುರಿತು ಮಾರ್ಗಸೂಚಿ ನೀಡಲಾಗುತ್ತದೆ’ ಎಂದರು.</p>.<p>‘ಕೆಮ್ಮಿನ ಭಿನ್ನ ಸಿರಪ್ಗಳ ಮಾದರಿಗಳ ಸಂಗ್ರಹಿಸಿ ತಪಾಸಣೆ ನಡೆದಿದೆ. ಶೀಘ್ರ ವರದಿ ಬರಲಿದೆ. ರಾಜ್ಯದಲ್ಲಿ ಯಾವುದೇ ಅಸುರಕ್ಷಿತ ಸಿರಪ್ ಮಾರುಕಟ್ಟೆಗೆ ಬಾರದಂತೆ ಕ್ರಮಕೈಗೊಳ್ಳುತ್ತಿದ್ದೇವೆ’ ಎಂದರು.</p>.<p>‘ಔಷಧಗಳ ವ್ಯವಹಾರದಲ್ಲಿ ಪಾರದರ್ಶಕತೆ ತರಲು ಕೇಂದ್ರಕ್ಕೂ ಪತ್ರ ಬರೆಯಲಾಗಿದೆ. ಸಿರಪ್ ತಯಾರಿಕಾ ಘಟಕಗಳು ಮತ್ತು ಸರಬರಾಜುದಾರರ ಸಂವಹನದ ಕೊರತೆ ಹಾಗೂ ನಿರ್ಲಕ್ಷ್ಯದಿಂದ ಇಂಥ ಅವಘಡ ನಡೆಯುತ್ತಿವೆ’ ಎಂದರು.</p>.<p>‘ಮಧ್ಯಪ್ರದೇಶದಲ್ಲಿ ಬಳಕೆಯಾದ ಕೆಮ್ಮಿನ ಸಿರಪ್ ರಾಜ್ಯದಲ್ಲಿ ಸರಬರಾಜಾಗಿಲ್ಲ. ತಮಿಳುನಾಡು ಸೇರಿ ವಿವಿಧೆಡೆ ಬಳಸಿರುವ ಮಾಹಿತಿ ಇದೆ. ಈ ಸಿರಪ್ಗಳಲ್ಲಿ ಡೈ ಎಥಿಲಿನ್ ಗ್ಲೈಕಾಲ್ ಎಂಬ ಹಾನಿಕರ ರಾಸಾಯನಿಕ ಅಂಶ ಬಳಕೆಯಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಹಾಸನ: ‘ರಾಜ್ಯದಲ್ಲಿ ಮಾರಾಟ ಆಗುತ್ತಿರುವ ಕೆಮ್ಮಿನ ಸಿರಪ್ನ ಗುಣಮಟ್ಟ ಕಳಪೆ ಆಗಿರುವುದರ ಮಾಹಿತಿ ಬಂದಿದ್ದು, ತಪಾಸಣೆಗೆ ಮಾದರಿಯನ್ನು ಕಳುಹಿಸಲಾಗಿದೆ. ಇಲಾಖೆ ಅಗತ್ಯ ಎಚ್ಚರಿಕೆ ವಹಿಸಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಮ್ಮಿನ ಸಿರಪ್ ಕುರಿತು ಸಾರ್ವಜನಿಕರು ವಹಿಸಬೇಕಾದ ಜಾಗ್ರತೆ ಕುರಿತು ಮಾರ್ಗಸೂಚಿ ನೀಡಲಾಗುತ್ತದೆ’ ಎಂದರು.</p>.<p>‘ಕೆಮ್ಮಿನ ಭಿನ್ನ ಸಿರಪ್ಗಳ ಮಾದರಿಗಳ ಸಂಗ್ರಹಿಸಿ ತಪಾಸಣೆ ನಡೆದಿದೆ. ಶೀಘ್ರ ವರದಿ ಬರಲಿದೆ. ರಾಜ್ಯದಲ್ಲಿ ಯಾವುದೇ ಅಸುರಕ್ಷಿತ ಸಿರಪ್ ಮಾರುಕಟ್ಟೆಗೆ ಬಾರದಂತೆ ಕ್ರಮಕೈಗೊಳ್ಳುತ್ತಿದ್ದೇವೆ’ ಎಂದರು.</p>.<p>‘ಔಷಧಗಳ ವ್ಯವಹಾರದಲ್ಲಿ ಪಾರದರ್ಶಕತೆ ತರಲು ಕೇಂದ್ರಕ್ಕೂ ಪತ್ರ ಬರೆಯಲಾಗಿದೆ. ಸಿರಪ್ ತಯಾರಿಕಾ ಘಟಕಗಳು ಮತ್ತು ಸರಬರಾಜುದಾರರ ಸಂವಹನದ ಕೊರತೆ ಹಾಗೂ ನಿರ್ಲಕ್ಷ್ಯದಿಂದ ಇಂಥ ಅವಘಡ ನಡೆಯುತ್ತಿವೆ’ ಎಂದರು.</p>.<p>‘ಮಧ್ಯಪ್ರದೇಶದಲ್ಲಿ ಬಳಕೆಯಾದ ಕೆಮ್ಮಿನ ಸಿರಪ್ ರಾಜ್ಯದಲ್ಲಿ ಸರಬರಾಜಾಗಿಲ್ಲ. ತಮಿಳುನಾಡು ಸೇರಿ ವಿವಿಧೆಡೆ ಬಳಸಿರುವ ಮಾಹಿತಿ ಇದೆ. ಈ ಸಿರಪ್ಗಳಲ್ಲಿ ಡೈ ಎಥಿಲಿನ್ ಗ್ಲೈಕಾಲ್ ಎಂಬ ಹಾನಿಕರ ರಾಸಾಯನಿಕ ಅಂಶ ಬಳಕೆಯಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>