ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿರುವ ಲೈಂಗಿಕ ಹಗರಣವು ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಬೇಡ ಎಂದು ಪಕ್ಷದ ಕೆಲವು ನಾಯಕರು ಪ್ರತಿಪಾದಿಸಿದ್ದರು. ಈ ಮಧ್ಯೆ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಚರ್ಚೆ ನಡೆಸಿ, ಪ್ರಜ್ವಲ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದರು. ಶಾ ಅವರು ಎರಡೂ ಪಕ್ಷಗಳ ಮಧ್ಯೆ ಮೈತ್ರಿ ಮುಂದುವರೆಸುವ ಬಗ್ಗೆ ಸೂಚನೆ ನೀಡಿದ್ದರು.
ಬಿಜೆಪಿ ಅಭ್ಯರ್ಥಿಗಳು
ಬೆಂಗಳೂರು ಪದವೀಧರರ ಕ್ಷೇತ್ರ: ಅ.ದೇವೇಗೌಡ
ಆಗ್ನೇಯ ಶಿಕ್ಷಕರ ಕ್ಷೇತ್ರ: ವೈ.ಎ.ನಾರಾಯಣಸ್ವಾಮಿ
ಈಶಾನ್ಯ ಪದವೀಧರರ ಕ್ಷೇತ್ರ: ಅಮರನಾಥ ಪಾಟೀಲ
ನೈರುತ್ಯ ಪದವೀಧರರ ಕ್ಷೇತ್ರ: ಧನಂಜಯ ಸರ್ಜಿ
ದಕ್ಷಿಣ ಶಿಕ್ಷಕರ ಕ್ಷೇತ್ರ: ಈ.ಸಿ.ನಿಂಗರಾಜು