<p><strong>ಬೆಂಗಳೂರು:</strong> ಇದೇ 29 ರಂದು (ಸೋಮವಾರ) ನಡೆಯುವ ವಿಧಾನಮಂಡಲ ಅಧಿವೇಶನದ ಸಂದರ್ಭ ವಿಧಾನಪರಿಷತ್ತಿನಲ್ಲಿ ಸಭಾನಾಯಕರ ನೇಮಕ ಆಗದೇ ಇರುವುದರಿಂದ ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಬಹುಮತ ಯಾಚನೆ ಮಾಡುವುದರ ಜತೆಗೆ ಧನವಿನಿಯೋಗ ಮಸೂದೆಗೂ ಒಪ್ಪಿಗೆ ಪಡೆಯಬೇಕಾಗಿದೆ. ಈ ಮಸೂದೆಯನ್ನು ವಿಧಾನಪರಿಷತ್ತೂ ಅಂಗೀಕರಿಸಬೇಕು. ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡದಿರುವುದರಿಂದ ಸಭಾನಾಯಕನ ನೇಮಕವೂ ಆಗಿಲ್ಲ. ಸಭಾನಾಯಕರಿಲ್ಲದೆ ವಿಧಾನಪರಿಷತ್ ಕಲಾಪ ನಡೆಸಲು ಸಾಧ್ಯವೇ ಎಂಬ ಜಿಜ್ಞಾಸೆ ಮೂಡಿದೆ.</p>.<p>ಏಕೆಂದರೆ, ವಿಧಾನಪರಿಷತ್ ನಿಯಮಾವಳಿ ಪ್ರಕಾರ, ಸಭಾನಾಯಕ ಎಂದರೆ, ಮುಖ್ಯಮಂತ್ರಿಯವರು ಪರಿಷತ್ತಿನ ಸದಸ್ಯರಾಗಿದ್ದರೆ ಅವರು ಅಥವಾ ಪರಿಷತ್ತಿನ ಸದಸ್ಯರಾಗಿರುವ ಹಾಗೂ ಸಭಾನಾಯಕರಾಗಿ ಕಾರ್ಯನಿರ್ವಹಿಸಲು ಮುಖ್ಯಮಂತ್ರಿಯವರಿಂದ ನಾಮ ನಿರ್ದೇಶಿತರಾದ ಮಂತ್ರಿಯವರು ಕಲಾಪದ ವೇಳೆಯಲ್ಲಿ ಹಾಜರಿರಬೇಕು.</p>.<p class="Subhead">ಮುಖ್ಯಮಂತ್ರಿ ಹಾಜರಿದ್ದರೆ ಸಾಕು: ಸೋಮವಾರ ಮಧ್ಯಾಹ್ನ 3.30 ಕ್ಕೆ ವಿಧಾನಪರಿಷತ್ ಕಲಾಪ ಆರಂಭಗೊಳ್ಳಲಿದೆ. ಧನವಿನಿಯೋಗ ಮಸೂದೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿಯವರು ಹಾಜರಿದ್ದರೆ ಸಾಕು ಎಂದು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಹೊಸ ಸರ್ಕಾರವಾದ್ದರಿಂದ ಒಂದು ದಿನದ ಮಟ್ಟಿಗೆ ಸಮಸ್ಯೆ ಇಲ್ಲ. ಸಚಿವ ಸಂಪುಟ ರಚನೆ ಆದ ಬಳಿಕ ಸಭಾನಾಯಕರನ್ನು ನೇಮಕ ಮಾಡಬಹುದು. ಆದ್ದರಿಂದ, ಈ ಅಧಿವೇಶನದಲ್ಲಿ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದೇ 29 ರಂದು (ಸೋಮವಾರ) ನಡೆಯುವ ವಿಧಾನಮಂಡಲ ಅಧಿವೇಶನದ ಸಂದರ್ಭ ವಿಧಾನಪರಿಷತ್ತಿನಲ್ಲಿ ಸಭಾನಾಯಕರ ನೇಮಕ ಆಗದೇ ಇರುವುದರಿಂದ ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಬಹುಮತ ಯಾಚನೆ ಮಾಡುವುದರ ಜತೆಗೆ ಧನವಿನಿಯೋಗ ಮಸೂದೆಗೂ ಒಪ್ಪಿಗೆ ಪಡೆಯಬೇಕಾಗಿದೆ. ಈ ಮಸೂದೆಯನ್ನು ವಿಧಾನಪರಿಷತ್ತೂ ಅಂಗೀಕರಿಸಬೇಕು. ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡದಿರುವುದರಿಂದ ಸಭಾನಾಯಕನ ನೇಮಕವೂ ಆಗಿಲ್ಲ. ಸಭಾನಾಯಕರಿಲ್ಲದೆ ವಿಧಾನಪರಿಷತ್ ಕಲಾಪ ನಡೆಸಲು ಸಾಧ್ಯವೇ ಎಂಬ ಜಿಜ್ಞಾಸೆ ಮೂಡಿದೆ.</p>.<p>ಏಕೆಂದರೆ, ವಿಧಾನಪರಿಷತ್ ನಿಯಮಾವಳಿ ಪ್ರಕಾರ, ಸಭಾನಾಯಕ ಎಂದರೆ, ಮುಖ್ಯಮಂತ್ರಿಯವರು ಪರಿಷತ್ತಿನ ಸದಸ್ಯರಾಗಿದ್ದರೆ ಅವರು ಅಥವಾ ಪರಿಷತ್ತಿನ ಸದಸ್ಯರಾಗಿರುವ ಹಾಗೂ ಸಭಾನಾಯಕರಾಗಿ ಕಾರ್ಯನಿರ್ವಹಿಸಲು ಮುಖ್ಯಮಂತ್ರಿಯವರಿಂದ ನಾಮ ನಿರ್ದೇಶಿತರಾದ ಮಂತ್ರಿಯವರು ಕಲಾಪದ ವೇಳೆಯಲ್ಲಿ ಹಾಜರಿರಬೇಕು.</p>.<p class="Subhead">ಮುಖ್ಯಮಂತ್ರಿ ಹಾಜರಿದ್ದರೆ ಸಾಕು: ಸೋಮವಾರ ಮಧ್ಯಾಹ್ನ 3.30 ಕ್ಕೆ ವಿಧಾನಪರಿಷತ್ ಕಲಾಪ ಆರಂಭಗೊಳ್ಳಲಿದೆ. ಧನವಿನಿಯೋಗ ಮಸೂದೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿಯವರು ಹಾಜರಿದ್ದರೆ ಸಾಕು ಎಂದು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಹೊಸ ಸರ್ಕಾರವಾದ್ದರಿಂದ ಒಂದು ದಿನದ ಮಟ್ಟಿಗೆ ಸಮಸ್ಯೆ ಇಲ್ಲ. ಸಚಿವ ಸಂಪುಟ ರಚನೆ ಆದ ಬಳಿಕ ಸಭಾನಾಯಕರನ್ನು ನೇಮಕ ಮಾಡಬಹುದು. ಆದ್ದರಿಂದ, ಈ ಅಧಿವೇಶನದಲ್ಲಿ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>