<p><strong>ಬೆಂಗಳೂರು:</strong> ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಉಪ ನೋಂದಣಾಧಿಕಾರಿ, ಹಿರಿಯ ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಪಾರದರ್ಶಕವಾಗಿ ಮಾಡಲು ಪ್ರಸಕ್ತ ಸಾಲಿನಿಂದಲೇ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಯೂ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಅದು ಮುಂದಿನ ವರ್ಷದಿಂದ ಜಾರಿಯಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ಒಟ್ಟು 257 ಉಪ ನೋಂದಣಾಧಿಕಾರಿ ಕಚೇರಿಗಳಿವೆ. ಅವುಗಳಲ್ಲಿ 51 ಕಚೇರಿಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿವೆ (ಬಿಎಂಆರ್ಡಿಎ ವ್ಯಾಪ್ತಿ). ಈ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಚೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಬಹುತೇಕರು ಬಹಳ ವರ್ಷಗಳಿಂದ ಬೆಂಗಳೂರು ನಗರದಲ್ಲೇ ಇದ್ದಾರೆ ಎಂದರು.</p>.<p>ಕಳೆದ ಎಂಟು ವರ್ಷಗಳಲ್ಲಿ ಬೆಂಗಳೂರು ಸುತ್ತಮುತ್ತಲಿನ ಕಚೇರಿಗಳಲ್ಲಿ 5 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಪನೋಂದಣಾಧಿಕಾರಿಗಳು, ಹಿರಿಯ ಉಪನೋಂದಣಾಧಿಕಾರಿಗಳು, ಕೇಂದ್ರ ಕಚೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳು, ಬಿಎಂಆರ್ಡಿಎ ವ್ಯಾಪ್ತಿಯ ಹೊರಗೆ 10 ನಗರಸಭೆಗಳ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಳೆದ 5 ವರ್ಷಗಳಲ್ಲಿ 4 ಅಥವಾ ಹೆಚ್ಚು ವರ್ಷ ಸೇವೆ ಸಲ್ಲಿಸಿರುವ ಈ ಎಲ್ಲ ಅಧಿಕಾರಿಗಳು ಹಾಗೂ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ಪ್ರಥಮ ದರ್ಜೆ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುವುದು. ಬೆಂಗಳೂರು ನಗರ ಮತ್ತು ಸುತ್ತಮುತ್ತ ಹಲವು ವರ್ಷಗಳಿಂದ ಕೆಲಸ ಮಾಡಿದವರನ್ನು ‘ಬಿ’ ದರ್ಜೆಯ ನಗರಗಳಿಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.</p>.<p>ಅಲ್ಲದೇ, ಜೂನ್ 25ರಂದು ಹೊರಡಿಸಿದ ವರ್ಗಾವಣೆ ಮಾರ್ಗಸೂಚಿ ಅನ್ವಯ ಶೇಕಡವಾರು ವರ್ಗಾವಣೆ ಮಿತಿಯನ್ನು ಮತ್ತು ಅಂತಿಮ ದಿನಾಂಕ ಸಡಿಲಗೊಳಿಸಿ ಆಗಸ್ಟ್ 10ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಪಾಟೀಲ ವಿವರಿಸಿದರು.</p>.<p>ವರ್ಗಾವಣೆ ಸಂಬಂಧ ಈಗಿರುವ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳಿವೆ. ಆದ್ದರಿಂದ, ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಬೆಂಗಳೂರಿನಲ್ಲೇ ಬಹಳ ವರ್ಷಗಳಿಂದ ಬೇರು ಬಿಟ್ಟವರನ್ನು ಬದಲಿಸಲು ತೀರ್ಮಾನಿಸಲಾಗಿದೆ ಎಂದು ಪಾಟೀಲ ತಿಳಿಸಿದರು.</p>.<p>ಘಟನೋತ್ತರ ಅನುಮೋದನೆ: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಹೊಸದಾಗಿ ಮಾರ್ಗಸೂಚಿಗಳನ್ನು ಹೊರಡಿಸಿ, ಜೂನ್ 26ರಂದು ಆದೇಶ ಹೊರಡಿಸಿರುವ ಕ್ರಮಕ್ಕೆ ಸಚಿವ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಿದೆ.</p>.<p>ಅರ್ಹತಾ ಸೇವಾವಧಿ 3 ವರ್ಷಕ್ಕೆ ಇಳಿಕೆ: ಅರಣ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೃಂದದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡಲು ನಿಗದಿಪಡಿಸಿರುವ ಅರ್ಹತಾ ಸೇವೆಯನ್ನು 5 ವರ್ಷಗಳಿಂದ 3 ವರ್ಷಗಳಿಗೆ ಇಳಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕೂಡಾ ಸಭೆ ಒಪ್ಪಿಗೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಉಪ ನೋಂದಣಾಧಿಕಾರಿ, ಹಿರಿಯ ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಪಾರದರ್ಶಕವಾಗಿ ಮಾಡಲು ಪ್ರಸಕ್ತ ಸಾಲಿನಿಂದಲೇ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಪ್ರಥಮ ದರ್ಜೆ ಸಹಾಯಕರ ವರ್ಗಾವಣೆಯೂ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಅದು ಮುಂದಿನ ವರ್ಷದಿಂದ ಜಾರಿಯಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ಒಟ್ಟು 257 ಉಪ ನೋಂದಣಾಧಿಕಾರಿ ಕಚೇರಿಗಳಿವೆ. ಅವುಗಳಲ್ಲಿ 51 ಕಚೇರಿಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿವೆ (ಬಿಎಂಆರ್ಡಿಎ ವ್ಯಾಪ್ತಿ). ಈ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪ ನೋಂದಣಾಧಿಕಾರಿಗಳು, ಹಿರಿಯ ಉಪ ನೋಂದಣಾಧಿಕಾರಿಗಳು, ಕೇಂದ್ರ ಕಚೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಬಹುತೇಕರು ಬಹಳ ವರ್ಷಗಳಿಂದ ಬೆಂಗಳೂರು ನಗರದಲ್ಲೇ ಇದ್ದಾರೆ ಎಂದರು.</p>.<p>ಕಳೆದ ಎಂಟು ವರ್ಷಗಳಲ್ಲಿ ಬೆಂಗಳೂರು ಸುತ್ತಮುತ್ತಲಿನ ಕಚೇರಿಗಳಲ್ಲಿ 5 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಪನೋಂದಣಾಧಿಕಾರಿಗಳು, ಹಿರಿಯ ಉಪನೋಂದಣಾಧಿಕಾರಿಗಳು, ಕೇಂದ್ರ ಕಚೇರಿ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರುಗಳು, ಬಿಎಂಆರ್ಡಿಎ ವ್ಯಾಪ್ತಿಯ ಹೊರಗೆ 10 ನಗರಸಭೆಗಳ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಳೆದ 5 ವರ್ಷಗಳಲ್ಲಿ 4 ಅಥವಾ ಹೆಚ್ಚು ವರ್ಷ ಸೇವೆ ಸಲ್ಲಿಸಿರುವ ಈ ಎಲ್ಲ ಅಧಿಕಾರಿಗಳು ಹಾಗೂ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ಪ್ರಥಮ ದರ್ಜೆ ಸಹಾಯಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುವುದು. ಬೆಂಗಳೂರು ನಗರ ಮತ್ತು ಸುತ್ತಮುತ್ತ ಹಲವು ವರ್ಷಗಳಿಂದ ಕೆಲಸ ಮಾಡಿದವರನ್ನು ‘ಬಿ’ ದರ್ಜೆಯ ನಗರಗಳಿಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.</p>.<p>ಅಲ್ಲದೇ, ಜೂನ್ 25ರಂದು ಹೊರಡಿಸಿದ ವರ್ಗಾವಣೆ ಮಾರ್ಗಸೂಚಿ ಅನ್ವಯ ಶೇಕಡವಾರು ವರ್ಗಾವಣೆ ಮಿತಿಯನ್ನು ಮತ್ತು ಅಂತಿಮ ದಿನಾಂಕ ಸಡಿಲಗೊಳಿಸಿ ಆಗಸ್ಟ್ 10ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಪಾಟೀಲ ವಿವರಿಸಿದರು.</p>.<p>ವರ್ಗಾವಣೆ ಸಂಬಂಧ ಈಗಿರುವ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳಿವೆ. ಆದ್ದರಿಂದ, ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಬೆಂಗಳೂರಿನಲ್ಲೇ ಬಹಳ ವರ್ಷಗಳಿಂದ ಬೇರು ಬಿಟ್ಟವರನ್ನು ಬದಲಿಸಲು ತೀರ್ಮಾನಿಸಲಾಗಿದೆ ಎಂದು ಪಾಟೀಲ ತಿಳಿಸಿದರು.</p>.<p>ಘಟನೋತ್ತರ ಅನುಮೋದನೆ: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಹೊಸದಾಗಿ ಮಾರ್ಗಸೂಚಿಗಳನ್ನು ಹೊರಡಿಸಿ, ಜೂನ್ 26ರಂದು ಆದೇಶ ಹೊರಡಿಸಿರುವ ಕ್ರಮಕ್ಕೆ ಸಚಿವ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಿದೆ.</p>.<p>ಅರ್ಹತಾ ಸೇವಾವಧಿ 3 ವರ್ಷಕ್ಕೆ ಇಳಿಕೆ: ಅರಣ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೃಂದದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡಲು ನಿಗದಿಪಡಿಸಿರುವ ಅರ್ಹತಾ ಸೇವೆಯನ್ನು 5 ವರ್ಷಗಳಿಂದ 3 ವರ್ಷಗಳಿಗೆ ಇಳಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕೂಡಾ ಸಭೆ ಒಪ್ಪಿಗೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>