‘ರಾಮಮಂದಿರ ಬೇರೆ ಕಡೆ ಕಟ್ಟಿದರೆ ದೇಣಿಗೆ ನೀಡುತ್ತೇನೆ ಎಂದು ಹಗುರವಾಗಿ ಟೀಕೆ ಮಾಡುತ್ತ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಇಂಥವರು ಮೌನವಾಗಿದ್ದರೆ ಅವರಿಗೂ ಕ್ಷೇಮ, ದೇಶಕ್ಕೂ ಕ್ಷೇಮ. ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಎಲ್ಲರೂ ಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಅದನ್ನು ಸಹಿಸದೇ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.