ಪ್ರಕರಣವೇನು?: ‘2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40 ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ’ ಎಂದು ಈ ಖಾಸಗಿ ದೂರು ದಾಖಲಿಸಲಾಗಿದೆ.