<p><strong>ಬೆಂಗಳೂರು</strong>: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್ನ ಉಚ್ಛಾಟಿತ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವಿಡಿಯೊಗಳು ಅಥವಾ ತಿರುಚಿದ ಸುದ್ದಿಗಳ ಪ್ರಸಾರ ಅಥವಾ ಪ್ರಕಟ ಮಾಡದಂತೆ ಕೋರ್ಟ್ ತಾತ್ಕಾಲಿಕ ಪ್ರತಿಬಂಧ ವಿಧಿಸಿದೆ.</p><p>ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅಸಲು ದಾವೆಯ ವಿಚಾರಣೆಯನ್ನು ರಜಾಕಾಲೀನ ಸಿಸಿಎಚ್ ಕೋರ್ಟ್ ನ್ಯಾಯಾಧೀಶ ಎಚ್.ಎ.ಮೋಹನ್ ವಿಚಾರಣೆ ನಡೆಸಿದ್ದು; ಪ್ರತಿವಾದಿಗಳಾದ ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಒಟ್ಟು 89 ಮಾಧ್ಯಮ ಸಂಸ್ಥೆಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕ ಆದೇಶ ನೀಡಿದ್ದಾರೆ.</p><p>‘ಪ್ರತಿವಾದಿ ಮಾಧ್ಯಮಗಳು ತಮ್ಮ ಬಳಿ ಪ್ರಬಲವಾದ ಸಾಕ್ಷ್ಯ ಹೊಂದಿದ್ದರೆ ಸುದ್ದಿ ಪ್ರಸಾರ ಅಥವಾ ಪ್ರಕಟ ಮಾಡದಂತೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿಲ್ಲ’ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಪ್ರತಿವಾದಿ ಮಾಧ್ಯಮ ಸಂಸ್ಥೆಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಇದೇ 29ಕ್ಕೆ ವಿಚಾರಣೆ ಮುಂದೂಡಲಾಗಿದೆ.</p>.ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!.ಎಸ್ಐಟಿ ಕಸ್ಟಡಿಗೆ ರೇವಣ್ಣ, ಇನ್ನೂ ಪತ್ತೆಯಾಗದ ಪ್ರಜ್ವಲ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್ನ ಉಚ್ಛಾಟಿತ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವಿಡಿಯೊಗಳು ಅಥವಾ ತಿರುಚಿದ ಸುದ್ದಿಗಳ ಪ್ರಸಾರ ಅಥವಾ ಪ್ರಕಟ ಮಾಡದಂತೆ ಕೋರ್ಟ್ ತಾತ್ಕಾಲಿಕ ಪ್ರತಿಬಂಧ ವಿಧಿಸಿದೆ.</p><p>ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅಸಲು ದಾವೆಯ ವಿಚಾರಣೆಯನ್ನು ರಜಾಕಾಲೀನ ಸಿಸಿಎಚ್ ಕೋರ್ಟ್ ನ್ಯಾಯಾಧೀಶ ಎಚ್.ಎ.ಮೋಹನ್ ವಿಚಾರಣೆ ನಡೆಸಿದ್ದು; ಪ್ರತಿವಾದಿಗಳಾದ ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಒಟ್ಟು 89 ಮಾಧ್ಯಮ ಸಂಸ್ಥೆಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕ ಆದೇಶ ನೀಡಿದ್ದಾರೆ.</p><p>‘ಪ್ರತಿವಾದಿ ಮಾಧ್ಯಮಗಳು ತಮ್ಮ ಬಳಿ ಪ್ರಬಲವಾದ ಸಾಕ್ಷ್ಯ ಹೊಂದಿದ್ದರೆ ಸುದ್ದಿ ಪ್ರಸಾರ ಅಥವಾ ಪ್ರಕಟ ಮಾಡದಂತೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿಲ್ಲ’ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಪ್ರತಿವಾದಿ ಮಾಧ್ಯಮ ಸಂಸ್ಥೆಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಇದೇ 29ಕ್ಕೆ ವಿಚಾರಣೆ ಮುಂದೂಡಲಾಗಿದೆ.</p>.ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!.ಎಸ್ಐಟಿ ಕಸ್ಟಡಿಗೆ ರೇವಣ್ಣ, ಇನ್ನೂ ಪತ್ತೆಯಾಗದ ಪ್ರಜ್ವಲ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>