ಈ ಕುರಿತಂತೆ ಎಸ್.ರಾಮದಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಮದಾಸ್ ಪರ ವಕೀಲ ಸಿ.ಎಚ್.ಹನುಮಂತರಾಯ ಅವರು, ‘ಖಾಸಗಿ ದೂರಿನಲ್ಲಿ ಹತ್ಯೆ ಯತ್ನದ ಆರೋಪ ಹೊರಿಸಲಾಗಿದ್ದು ಇದು ಸೆಷನ್ಸ್ ಕೋರ್ಟ್ ವಿಚಾರಣಾ ವ್ಯಾಪ್ತಿಗೆ ಒಳಪಟ್ಟಿದೆ ಮತ್ತು ತನಿಖೆಗೆ ಆದೇಶಿಸಿರುವುದು ಕಾನೂನು ಬದ್ಧವಲ್ಲ. ಆದ್ದರಿಂದ ತಡೆ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ತನಿಖೆಗೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿದೆ.