ಬೆಂಗಳೂರು ಜಲಮಂಡಳಿಯ ಸಹಾಯಕ/ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಏಳು ಅಭ್ಯರ್ಥಿಗಳ ಎಂಜಿನಿಯರಿಂಗ್ ಪದವಿಗಳನ್ನು ವಿಜ್ಞಾನ ಪದವಿ ಎಂದು ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ 2020ರ ಸೆಪ್ಟೆಂಬರ್ 3ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಜಲಮಂಡಳಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.