<p><strong>ಚಿಕ್ಕಬಳ್ಳಾಪುರ:</strong> ಮಾರಣಾಂತಿಕ ಕೋವಿಡ್ ಸೋಂಕಿಗೆ ಗೌರಿಬಿದನೂರಿನ ಒಬ್ಬ ವೃದ್ಧೆ ಬಲಿಯಾಗಿ, ಮೂರು ಜನರು ಜೀವನ್ಮರಣದ ಹೋರಾಟ ನಡೆಸಿರುವಾಗಲೇ, ಸೋಂಕಿತರ ಸಂಪರ್ಕಕ್ಕೆ ಬಂದವರ ಪೈಕಿ ಐದು ಜನರಲ್ಲಿ ಕೋವಿಡ್ ಸೋಂಕಿರುವುದು ಶುಕ್ರವಾರ ದೃಢವಾಗಿದೆ.</p>.<p>ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿದ್ದು, ಜಿಲ್ಲೆಯ ನಾಗರಿಕರಲ್ಲಿ ತಲ್ಲಣ ಮೂಡಿಸಿದೆ.<br />ಕಳೆದ ಫೆಬ್ರುವರಿಯಲ್ಲಿ ಮೆಕ್ಕಾ ಯಾತ್ರೆ ನಡೆಸಿ ಮಾರ್ಚ್ ಎರಡನೇ ವಾರದಲ್ಲಿ ವಾಪಾಸಾಗಿದ್ದ ಗೌರಿಬಿದನೂರು ನಗರದ ನಾಲ್ಕು ಯಾತ್ರಿಕರಿಗೆ ಕೋವಿಡ್-19 ತಗಲಿರುವುದು ಮಾರ್ಚ್ 21, 23, 24 ಮತ್ತು 26 ರಂದು ದೃಢಪಟ್ಟಿತ್ತು.ಈ ಪೈಕಿ ಗೌರಿಬಿದನೂರಿನಲ್ಲಿ ಮಗನ ಮನೆಯಲ್ಲಿ ಗೃಹ ಬಂಧನದಲ್ಲಿದ್ದ ನೆರೆಯ ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿಗೆ ಸೇರಿದ ಮಹಿಳೆ ಮಾರ್ಚ್ 25 ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.</p>.<p>ಮೊದಲು ದೃಢಪಟ್ಟ ಮೂರು ಪ್ರಕರಣಗಳ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದ 22 ಜನರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತ್ಯೇಕ ಗೃಹ ಬಂಧನಕ್ಕೆ ಒಳಪಡಿಸಿ, ಅವರ ಗಂಟಲ ದ್ರವದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು.</p>.<p>ಶುಕ್ರವಾರ ಬಂದ ಪ್ರಯೋಗಾಲಯದ ವರದಿಯಲ್ಲಿ ಐದು ಜನರಲ್ಲಿ ಕೋವಿಡ್ 19 ಲಕ್ಷಣಗಳು ಇರುವುದು (ಪಾಸಿಟಿವ್) ಪತ್ತೆಯಾಗಿದೆ. ಇನ್ನು ಇಬ್ಬರಲ್ಲಿ ಸೋಂಕು ಇರುವ ಶಂಕೆ ಇದ್ದು, ಅದು ಶನಿವಾರ ಬರುವ ವರದಿಯಲ್ಲಿ ದೃಢವಾಗಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p>ಗೌರಿಬಿದನೂರಿನಲ್ಲಿ ಗೃಹ ಬಂಧನದಲ್ಲಿ ಇದ್ದವರ ಪೈಕಿ ಏಳು ಜನರನ್ನು ಶುಕ್ರವಾರ ರಾತ್ರಿ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಸಜ್ಜುಗೊಳಿಸಿದ ಪ್ರತ್ಯೇಕ ವಾರ್ಡ್ಗೆ ಸ್ಥಳಾಂತರಿಸಿ, ನಿಗಾ ವಹಿಸಲಾಗಿದೆ.</p>.<p>ಗೌರಿಬಿದನೂರಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡುತ್ತಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮಾರಣಾಂತಿಕ ಕೋವಿಡ್ ಸೋಂಕಿಗೆ ಗೌರಿಬಿದನೂರಿನ ಒಬ್ಬ ವೃದ್ಧೆ ಬಲಿಯಾಗಿ, ಮೂರು ಜನರು ಜೀವನ್ಮರಣದ ಹೋರಾಟ ನಡೆಸಿರುವಾಗಲೇ, ಸೋಂಕಿತರ ಸಂಪರ್ಕಕ್ಕೆ ಬಂದವರ ಪೈಕಿ ಐದು ಜನರಲ್ಲಿ ಕೋವಿಡ್ ಸೋಂಕಿರುವುದು ಶುಕ್ರವಾರ ದೃಢವಾಗಿದೆ.</p>.<p>ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿದ್ದು, ಜಿಲ್ಲೆಯ ನಾಗರಿಕರಲ್ಲಿ ತಲ್ಲಣ ಮೂಡಿಸಿದೆ.<br />ಕಳೆದ ಫೆಬ್ರುವರಿಯಲ್ಲಿ ಮೆಕ್ಕಾ ಯಾತ್ರೆ ನಡೆಸಿ ಮಾರ್ಚ್ ಎರಡನೇ ವಾರದಲ್ಲಿ ವಾಪಾಸಾಗಿದ್ದ ಗೌರಿಬಿದನೂರು ನಗರದ ನಾಲ್ಕು ಯಾತ್ರಿಕರಿಗೆ ಕೋವಿಡ್-19 ತಗಲಿರುವುದು ಮಾರ್ಚ್ 21, 23, 24 ಮತ್ತು 26 ರಂದು ದೃಢಪಟ್ಟಿತ್ತು.ಈ ಪೈಕಿ ಗೌರಿಬಿದನೂರಿನಲ್ಲಿ ಮಗನ ಮನೆಯಲ್ಲಿ ಗೃಹ ಬಂಧನದಲ್ಲಿದ್ದ ನೆರೆಯ ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿಗೆ ಸೇರಿದ ಮಹಿಳೆ ಮಾರ್ಚ್ 25 ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.</p>.<p>ಮೊದಲು ದೃಢಪಟ್ಟ ಮೂರು ಪ್ರಕರಣಗಳ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದ 22 ಜನರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತ್ಯೇಕ ಗೃಹ ಬಂಧನಕ್ಕೆ ಒಳಪಡಿಸಿ, ಅವರ ಗಂಟಲ ದ್ರವದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು.</p>.<p>ಶುಕ್ರವಾರ ಬಂದ ಪ್ರಯೋಗಾಲಯದ ವರದಿಯಲ್ಲಿ ಐದು ಜನರಲ್ಲಿ ಕೋವಿಡ್ 19 ಲಕ್ಷಣಗಳು ಇರುವುದು (ಪಾಸಿಟಿವ್) ಪತ್ತೆಯಾಗಿದೆ. ಇನ್ನು ಇಬ್ಬರಲ್ಲಿ ಸೋಂಕು ಇರುವ ಶಂಕೆ ಇದ್ದು, ಅದು ಶನಿವಾರ ಬರುವ ವರದಿಯಲ್ಲಿ ದೃಢವಾಗಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.</p>.<p>ಗೌರಿಬಿದನೂರಿನಲ್ಲಿ ಗೃಹ ಬಂಧನದಲ್ಲಿ ಇದ್ದವರ ಪೈಕಿ ಏಳು ಜನರನ್ನು ಶುಕ್ರವಾರ ರಾತ್ರಿ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಸಜ್ಜುಗೊಳಿಸಿದ ಪ್ರತ್ಯೇಕ ವಾರ್ಡ್ಗೆ ಸ್ಥಳಾಂತರಿಸಿ, ನಿಗಾ ವಹಿಸಲಾಗಿದೆ.</p>.<p>ಗೌರಿಬಿದನೂರಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡುತ್ತಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>