<p><strong>ಬೆಂಗಳೂರು: </strong>ಲಾಕ್ಡೌನ್ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಇನ್ನೂ ಕೆಲವು ಸಮುದಾಯದವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ₹512.50 ಕೋಟಿ ಮೊತ್ತದ ಮೂರನೇ ಪ್ಯಾಕೇಜ್ ಪ್ರಕಟಿಸಿದ್ದಾರೆ. ಇದರಿಂದಾಗಿ ಈವರೆಗೆ ಒಟ್ಟು ₹2,272 ಕೋಟಿ ಪರಿಹಾರ ಘೋಷಿಸಿದಂತಾಗಿದೆ.</p>.<p>ಸೂಕ್ತ ಬೆಲೆ ಸಿಗದೇ ಕಂಗಾಲಾಗಿರುವ ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರು, ಕುರಿ ಸಾಕಣೆದಾರರು ಮತ್ತು ರೇಷ್ಮೆ ರೀಲರ್ಗಳಿಗೆ ಮೂರನೇ ಪ್ಯಾಕೇಜ್ನಿಂದ ಪ್ರಯೋಜನ ಸಿಗಲಿದೆ.</p>.<p>ಮೆಕ್ಕೆಜೋಳಕ್ಕೆ ಕ್ವಿಂಟಲ್ಗೆ ₹1,760 ಬೆಂಬಲ ಬೆಲೆ ಪ್ರಕಟಿಸಿದ್ದರೂ ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ 10 ಲಕ್ಷ ರೈತರು ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿಯೊಬ್ಬರಿಗೂ ಒಂದು ಬಾರಿಯ ಪರಿಹಾರ ಎಂದು ₹5,000 ನೀಡಲಾಗುವುದು. ಇದಕ್ಕೆ ₹500 ಕೋಟಿ ವೆಚ್ಚವಾಗುತ್ತದೆ ಎಂದು ಯಡಿಯೂರಪ್ಪ ಅವರು ವಿವರಿಸಿದರು.</p>.<p>ಆಶಾ ಕಾರ್ಯಕರ್ತೆಯರು ಕೋವಿಡ್ ವಿರುದ್ಧ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. 40,250 ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ತಲಾ ₹3,000 ಪ್ರೋತ್ಸಾಹ ಧನ ನೀಡಲಾಗುವುದು. ಇದಕ್ಕೆ ₹12.50 ಕೋಟಿ ಬೇಕಾಗುತ್ತದೆ. ಸಹಕಾರ ಸಂಘಗಳಿಂದ ಸಂಗ್ರಹಿಸಿ ಸಹಕಾರ ಇಲಾಖೆ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.</p>.<p>ನೈಸರ್ಗಿಕ ವಿಕೋಪದಿಂದ ಕುರಿ ಮತ್ತು ಮೇಕೆಗಳು ಸತ್ತರೆ ₹5,000 ಪರಿಹಾರ ನೀಡುವ ಹಳೇ ಯೋಜನೆಯನ್ನು ಮುಂದುವ<br />ರಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಯೋಜನೆಗೆ ತಡೆ ನೀಡಲಾಗಿತ್ತು. ಈ ಯೋಜನೆಯನ್ನು ಪುನಾರಂಭಿ ಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು.</p>.<p>ಅಲ್ಲದೆ, ರೇಷ್ಮೆ ನೂಲು ಖರೀದಿಗಾಗಿ ₹10 ಕೋಟಿಯನ್ನು ಬಿಡುಗಡೆ ಮಾಡ ಲಾಗಿದೆ. ಪ್ರತಿಯೊಬ್ಬ ರೀಲರ್ನಿಂದ 20 ಕೆ.ಜಿ ನೂಲು ಖರೀದಿಸಲಾಗುವುದು. ರೇಷ್ಮೆ ಅಡಮಾನ ಸಾಲ ಪಡೆ ಯುವ ಮಿತಿಯನ್ನು ₹1 ಲಕ್ಷದಿಂದ ₹2 ಲಕ್ಷಕ್ಕೆ ಏರಿಸಲಾಗಿದೆ ಎಂದು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.</p>.<p>ಮೊದಲ ಹಂತದ ಲಾಕ್ಡೌನ್ ಮುಗಿದ ಬಳಿಕ ಶ್ರಮಿಕ ವರ್ಗಕ್ಕೆ ಯಡಿಯೂರಪ್ಪ ಅವರು ₹1,610 ಕೋಟಿ ಪ್ಯಾಕೇಜ್ ಪ್ರಕಟಿಸಿದ್ದರು. ಎರಡನೇ ಹಂತದ ಪ್ಯಾಕೇಜ್ನಲ್ಲಿ ಹಣ್ಣು ಮತ್ತು ತರಕಾರಿ ಬೆಳೆದು ನಷ್ಟಕ್ಕೆ ಒಳಗಾದವರು ಮತ್ತು ವಿದ್ಯುತ್ ಮಗ್ಗ ದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗಾಗಿ ಗುರುವಾರ ₹162 ಕೋಟಿ ಪ್ರಕಟಿಸಿದ್ದರು.</p>.<p><strong>***</strong></p>.<p>ಸರ್ಕಾರದ ಆರ್ಥಿಕ ಇತಿಮಿತಿಯಲ್ಲಿ ಪರಿಹಾರ ಕೊಟ್ಟಿದ್ದೇವೆ. ಎಲ್ಲರಿಗೂ ಕೊಡುವುದು ಕಷ್ಟವಾಗುತ್ತದೆ, ಮುಂದೆ ಅನುಕೂಲ ಆದಾಗ ನೋಡೋಣ</p>.<p>– ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲಾಕ್ಡೌನ್ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಇನ್ನೂ ಕೆಲವು ಸಮುದಾಯದವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ₹512.50 ಕೋಟಿ ಮೊತ್ತದ ಮೂರನೇ ಪ್ಯಾಕೇಜ್ ಪ್ರಕಟಿಸಿದ್ದಾರೆ. ಇದರಿಂದಾಗಿ ಈವರೆಗೆ ಒಟ್ಟು ₹2,272 ಕೋಟಿ ಪರಿಹಾರ ಘೋಷಿಸಿದಂತಾಗಿದೆ.</p>.<p>ಸೂಕ್ತ ಬೆಲೆ ಸಿಗದೇ ಕಂಗಾಲಾಗಿರುವ ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರು, ಕುರಿ ಸಾಕಣೆದಾರರು ಮತ್ತು ರೇಷ್ಮೆ ರೀಲರ್ಗಳಿಗೆ ಮೂರನೇ ಪ್ಯಾಕೇಜ್ನಿಂದ ಪ್ರಯೋಜನ ಸಿಗಲಿದೆ.</p>.<p>ಮೆಕ್ಕೆಜೋಳಕ್ಕೆ ಕ್ವಿಂಟಲ್ಗೆ ₹1,760 ಬೆಂಬಲ ಬೆಲೆ ಪ್ರಕಟಿಸಿದ್ದರೂ ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ 10 ಲಕ್ಷ ರೈತರು ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿಯೊಬ್ಬರಿಗೂ ಒಂದು ಬಾರಿಯ ಪರಿಹಾರ ಎಂದು ₹5,000 ನೀಡಲಾಗುವುದು. ಇದಕ್ಕೆ ₹500 ಕೋಟಿ ವೆಚ್ಚವಾಗುತ್ತದೆ ಎಂದು ಯಡಿಯೂರಪ್ಪ ಅವರು ವಿವರಿಸಿದರು.</p>.<p>ಆಶಾ ಕಾರ್ಯಕರ್ತೆಯರು ಕೋವಿಡ್ ವಿರುದ್ಧ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. 40,250 ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ವತಿಯಿಂದ ತಲಾ ₹3,000 ಪ್ರೋತ್ಸಾಹ ಧನ ನೀಡಲಾಗುವುದು. ಇದಕ್ಕೆ ₹12.50 ಕೋಟಿ ಬೇಕಾಗುತ್ತದೆ. ಸಹಕಾರ ಸಂಘಗಳಿಂದ ಸಂಗ್ರಹಿಸಿ ಸಹಕಾರ ಇಲಾಖೆ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.</p>.<p>ನೈಸರ್ಗಿಕ ವಿಕೋಪದಿಂದ ಕುರಿ ಮತ್ತು ಮೇಕೆಗಳು ಸತ್ತರೆ ₹5,000 ಪರಿಹಾರ ನೀಡುವ ಹಳೇ ಯೋಜನೆಯನ್ನು ಮುಂದುವ<br />ರಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಯೋಜನೆಗೆ ತಡೆ ನೀಡಲಾಗಿತ್ತು. ಈ ಯೋಜನೆಯನ್ನು ಪುನಾರಂಭಿ ಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು.</p>.<p>ಅಲ್ಲದೆ, ರೇಷ್ಮೆ ನೂಲು ಖರೀದಿಗಾಗಿ ₹10 ಕೋಟಿಯನ್ನು ಬಿಡುಗಡೆ ಮಾಡ ಲಾಗಿದೆ. ಪ್ರತಿಯೊಬ್ಬ ರೀಲರ್ನಿಂದ 20 ಕೆ.ಜಿ ನೂಲು ಖರೀದಿಸಲಾಗುವುದು. ರೇಷ್ಮೆ ಅಡಮಾನ ಸಾಲ ಪಡೆ ಯುವ ಮಿತಿಯನ್ನು ₹1 ಲಕ್ಷದಿಂದ ₹2 ಲಕ್ಷಕ್ಕೆ ಏರಿಸಲಾಗಿದೆ ಎಂದು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.</p>.<p>ಮೊದಲ ಹಂತದ ಲಾಕ್ಡೌನ್ ಮುಗಿದ ಬಳಿಕ ಶ್ರಮಿಕ ವರ್ಗಕ್ಕೆ ಯಡಿಯೂರಪ್ಪ ಅವರು ₹1,610 ಕೋಟಿ ಪ್ಯಾಕೇಜ್ ಪ್ರಕಟಿಸಿದ್ದರು. ಎರಡನೇ ಹಂತದ ಪ್ಯಾಕೇಜ್ನಲ್ಲಿ ಹಣ್ಣು ಮತ್ತು ತರಕಾರಿ ಬೆಳೆದು ನಷ್ಟಕ್ಕೆ ಒಳಗಾದವರು ಮತ್ತು ವಿದ್ಯುತ್ ಮಗ್ಗ ದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗಾಗಿ ಗುರುವಾರ ₹162 ಕೋಟಿ ಪ್ರಕಟಿಸಿದ್ದರು.</p>.<p><strong>***</strong></p>.<p>ಸರ್ಕಾರದ ಆರ್ಥಿಕ ಇತಿಮಿತಿಯಲ್ಲಿ ಪರಿಹಾರ ಕೊಟ್ಟಿದ್ದೇವೆ. ಎಲ್ಲರಿಗೂ ಕೊಡುವುದು ಕಷ್ಟವಾಗುತ್ತದೆ, ಮುಂದೆ ಅನುಕೂಲ ಆದಾಗ ನೋಡೋಣ</p>.<p>– ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>