<p><strong>ಬಳ್ಳಾರಿ: </strong>ಮುಂಬೈ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ವಾಪಸಾದ ಜಿಲ್ಲೆಯ 11 ಮಂದಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ತಿಳಿಸಿದರು.</p>.<p>ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಒಬ್ಬ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಮಹಿಳೆಯರ ಪೈಕಿ ಒಬ್ಬ ಗರ್ಭಿಣಿ ಮತ್ತು ಒಬ್ಬ ಬಾಣಂತಿ ಇದ್ದಾರೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>'ಬಳ್ಳಾರಿ ನಗರದ 6, ಬಳ್ಳಾರಿ ತಾಲ್ಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ. ಬಾಣಂತಿಯ ಒಂಭತ್ತು ತಿಂಗಳ ಹಸುಗೂಸು ಅಜ್ಜ-ಅಜ್ಜಿ ಬಳಿ ಇದ್ದು, ಅದರ ಗಂಟಲ ದ್ರವದ ಮಾದರಿಯನ್ನು ತಜ್ಞರ ನೆರವಿನೊಂದಿಗೆ ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುವುದು ಎಂದರು.</p>.<p>ಮೇ 6 ರಂದು ಅನಂತಪುರದ ಜಿಲ್ಲಾಧಿಕಾರಿ ನೀಡಿದ ಮಾಹಿತಿ ಅನ್ವಯ 65 ಮಂದಿಯನ್ನು ಗುಂತಕಲ್ ರೈಲು ನಿಲ್ದಾಣ ದಿಂದ ನೇರವಾಗಿ ಕ್ವಾರಂಟೈನ್ ಕೇಂದ್ರಗಳಿಗೆ ಕರೆದೊಯ್ಯಲಾಗಿತ್ತು. ಹೀಗಾಗಿ ಅವರ ಊರುಗಳಲ್ಲಿ ಕಂಟೈನ್ಮೆಂಟ್ ಪ್ರದೇಶಗಳನ್ನು ಘೋಷಿಸುವ ಅಗತ್ಯವಿಲ್ಲ ಎಂದರು.</p>.<p><strong>187 ಮಂದಿಗೆ ಕ್ವಾರಂಟೈನ್: </strong>11 ಸೋಂಕಿತರೊಂದಿಗೆ ಮೊದಲ ಹಂತದ ಸಂಪರ್ಕ ಹೊಂದಿದ್ದ 49 ಮಂದಿ ಸೇರಿದಂತೆ 187 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p><strong>ಬಿಗಿ ಭದ್ರತೆ:</strong> ಕ್ವಾರಂಟೈನ್ ಕೇಂದ್ರಗಳಿಂದ ಕೆಲವರು ಪರಾರಿಯಾಗಿದ್ದ ಪ್ರಕರಣ ನಡೆದಿದ್ದ ಹಿನ್ನೆಲೆಯಲ್ಲಿ ಎಲ್ಲ ಕ್ವಾರಂಟೈನ್ ಕೇಂದ್ರಗಳಿಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಮುಂಬೈ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ವಾಪಸಾದ ಜಿಲ್ಲೆಯ 11 ಮಂದಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ತಿಳಿಸಿದರು.</p>.<p>ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಒಬ್ಬ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಮಹಿಳೆಯರ ಪೈಕಿ ಒಬ್ಬ ಗರ್ಭಿಣಿ ಮತ್ತು ಒಬ್ಬ ಬಾಣಂತಿ ಇದ್ದಾರೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>'ಬಳ್ಳಾರಿ ನಗರದ 6, ಬಳ್ಳಾರಿ ತಾಲ್ಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ. ಬಾಣಂತಿಯ ಒಂಭತ್ತು ತಿಂಗಳ ಹಸುಗೂಸು ಅಜ್ಜ-ಅಜ್ಜಿ ಬಳಿ ಇದ್ದು, ಅದರ ಗಂಟಲ ದ್ರವದ ಮಾದರಿಯನ್ನು ತಜ್ಞರ ನೆರವಿನೊಂದಿಗೆ ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುವುದು ಎಂದರು.</p>.<p>ಮೇ 6 ರಂದು ಅನಂತಪುರದ ಜಿಲ್ಲಾಧಿಕಾರಿ ನೀಡಿದ ಮಾಹಿತಿ ಅನ್ವಯ 65 ಮಂದಿಯನ್ನು ಗುಂತಕಲ್ ರೈಲು ನಿಲ್ದಾಣ ದಿಂದ ನೇರವಾಗಿ ಕ್ವಾರಂಟೈನ್ ಕೇಂದ್ರಗಳಿಗೆ ಕರೆದೊಯ್ಯಲಾಗಿತ್ತು. ಹೀಗಾಗಿ ಅವರ ಊರುಗಳಲ್ಲಿ ಕಂಟೈನ್ಮೆಂಟ್ ಪ್ರದೇಶಗಳನ್ನು ಘೋಷಿಸುವ ಅಗತ್ಯವಿಲ್ಲ ಎಂದರು.</p>.<p><strong>187 ಮಂದಿಗೆ ಕ್ವಾರಂಟೈನ್: </strong>11 ಸೋಂಕಿತರೊಂದಿಗೆ ಮೊದಲ ಹಂತದ ಸಂಪರ್ಕ ಹೊಂದಿದ್ದ 49 ಮಂದಿ ಸೇರಿದಂತೆ 187 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p><strong>ಬಿಗಿ ಭದ್ರತೆ:</strong> ಕ್ವಾರಂಟೈನ್ ಕೇಂದ್ರಗಳಿಂದ ಕೆಲವರು ಪರಾರಿಯಾಗಿದ್ದ ಪ್ರಕರಣ ನಡೆದಿದ್ದ ಹಿನ್ನೆಲೆಯಲ್ಲಿ ಎಲ್ಲ ಕ್ವಾರಂಟೈನ್ ಕೇಂದ್ರಗಳಿಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>