<p><strong>ಬೆಂಗಳೂರು: </strong>ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ 7626 ಮಂದಿ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕು ತಗುಲಿ, ಚೇತರಿಸಿಕೊಂಡಿರುವವರ ಸಂಖ್ಯೆ 1,84,568ಕ್ಕೆ ಏರಿಕೆಯಾಗಿದೆ.</p>.<p>ರಾಜ್ಯದ ವಿವಿಧೆಡೆ ಇಂದು ಒಂದೇ ದಿನ 7330 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 82,677 ಸೋಂಕಿತರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 727 ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ರಾಜ್ಯದಲ್ಲಿ ಈವರೆಗೆ ಒಟ್ಟು 4615 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಶನಿವಾರ ಮೃತಪಟ್ಟವರ ಸಂಖ್ಯೆ 93 ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ರಾಜ್ಯದ ವಿವಿಧೆಡೆ ಇಂದು ಒಟ್ಟು 58,618 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೆ ಒಟ್ಟು 23,73,103 ಮಾದರಿಗಳ ತಪಾಸಣೆ ನಡೆದಿದೆ.</p>.<p>ಬೆಂಗಳೂರು ನಗರದಲ್ಲಿ ಶನಿವಾರ ಅತಿಹೆಚ್ಚು ಅಂದರೆ 2979 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 533, ಉಡುಪಿ ಜಿಲ್ಲೆಯಲ್ಲಿ 348 ಮತ್ತು ಬೆಳಗಾವಿ ಜಿಲ್ಲೆಯಲ್ಲಿ 312 ಮಂದಿಯಲ್ಲಿ ಒಂದೇ ದಿನ ಸೋಂಕು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ 7626 ಮಂದಿ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕು ತಗುಲಿ, ಚೇತರಿಸಿಕೊಂಡಿರುವವರ ಸಂಖ್ಯೆ 1,84,568ಕ್ಕೆ ಏರಿಕೆಯಾಗಿದೆ.</p>.<p>ರಾಜ್ಯದ ವಿವಿಧೆಡೆ ಇಂದು ಒಂದೇ ದಿನ 7330 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 82,677 ಸೋಂಕಿತರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 727 ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ರಾಜ್ಯದಲ್ಲಿ ಈವರೆಗೆ ಒಟ್ಟು 4615 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಶನಿವಾರ ಮೃತಪಟ್ಟವರ ಸಂಖ್ಯೆ 93 ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ರಾಜ್ಯದ ವಿವಿಧೆಡೆ ಇಂದು ಒಟ್ಟು 58,618 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೆ ಒಟ್ಟು 23,73,103 ಮಾದರಿಗಳ ತಪಾಸಣೆ ನಡೆದಿದೆ.</p>.<p>ಬೆಂಗಳೂರು ನಗರದಲ್ಲಿ ಶನಿವಾರ ಅತಿಹೆಚ್ಚು ಅಂದರೆ 2979 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 533, ಉಡುಪಿ ಜಿಲ್ಲೆಯಲ್ಲಿ 348 ಮತ್ತು ಬೆಳಗಾವಿ ಜಿಲ್ಲೆಯಲ್ಲಿ 312 ಮಂದಿಯಲ್ಲಿ ಒಂದೇ ದಿನ ಸೋಂಕು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>