<figcaption>""</figcaption>.<p><strong>ಬೆಂಗಳೂರು:</strong>ರಾಜ್ಯದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5ರ ವರೆಗೆ ಒಟ್ಟು 6,259 ಕೋವಿಡ್–19 ಸೋಂಕು ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 110 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,704ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ6,777 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಚೇತರಿಸಿಕೊಂಡವರ ಸಂಖ್ಯೆ69,272ಕ್ಕೆ ಹೆಚ್ಚಾಗಿದೆ. ಇನ್ನೂ 73,846 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೋವಿಡ್–19 ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2,035 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 63,033ಕ್ಕೆ ಏರಿಕೆಯಾಗಿದೆ. ಇದರಲ್ಲಿ 27,877 ಸೋಂಕಿತರುಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 34,021 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಉಳಿದಂತೆ ಮೈಸೂರಿನಲ್ಲಿ 662, ಕಲಬುರ್ಗಿಯಲ್ಲಿ 285, ಬಳ್ಳಾರಿಯಲ್ಲಿ 284, ಬೆಳಗಾವಿಯಲ್ಲಿ 263, ದಕ್ಷಿಣ ಕನ್ನಡದಲ್ಲಿ 225, ದಾವಣಗೆರೆಯಲ್ಲಿ 191 ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong>ರಾಜ್ಯದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5ರ ವರೆಗೆ ಒಟ್ಟು 6,259 ಕೋವಿಡ್–19 ಸೋಂಕು ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 110 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,704ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ6,777 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಚೇತರಿಸಿಕೊಂಡವರ ಸಂಖ್ಯೆ69,272ಕ್ಕೆ ಹೆಚ್ಚಾಗಿದೆ. ಇನ್ನೂ 73,846 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೋವಿಡ್–19 ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2,035 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 63,033ಕ್ಕೆ ಏರಿಕೆಯಾಗಿದೆ. ಇದರಲ್ಲಿ 27,877 ಸೋಂಕಿತರುಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 34,021 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಉಳಿದಂತೆ ಮೈಸೂರಿನಲ್ಲಿ 662, ಕಲಬುರ್ಗಿಯಲ್ಲಿ 285, ಬಳ್ಳಾರಿಯಲ್ಲಿ 284, ಬೆಳಗಾವಿಯಲ್ಲಿ 263, ದಕ್ಷಿಣ ಕನ್ನಡದಲ್ಲಿ 225, ದಾವಣಗೆರೆಯಲ್ಲಿ 191 ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>