<p><strong>ಬೆಂಗಳೂರು</strong>: ರಾಜ್ಯದಲ್ಲಿ ಹೊಸದಾಗಿ 2,082 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. ಇವು ಕೋವಿಡ್ ಎರಡನೇ ಅಲೆಯ ಅವಧಿಯಲ್ಲಿ ವರದಿಯಾದ ಕನಿಷ್ಠ ಪ್ರಕರಣಗಳಾಗಿವೆ.</p>.<p>ಕಳೆದ ಮಾರ್ಚ್ ಮೂರನೇ ವಾರದ ಬಳಿಕ ಸೋಂಕಿತರ ಸಂಖ್ಯೆ ಏರುಗತಿ ಪಡೆದುಕೊಂಡಿತ್ತು. ಕಳೆದೊಂದು ತಿಂಗಳಿನಿಂದ ಈ ಸಂಖ್ಯೆ ಇಳಿಮುಖ ಮಾಡಿದೆ. ಒಂದು ದಿನದ ಅವಧಿಯಲ್ಲಿ 1.54 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 1.34ಕ್ಕೆ ಇಳಿಕೆಯಾಗಿದೆ. ಮೂರುವರೆ ತಿಂಗಳಲ್ಲಿ ವರದಿಯಾದ ಕನಿಷ್ಠ ದೃಢಪ್ರಮಾಣ ಇದಾಗಿದೆ.</p>.<p>ಬೆಂಗಳೂರಿನಲ್ಲಿ 481, ಮೈಸೂರಿನಲ್ಲಿ 227, ದಕ್ಷಿಣ ಕನ್ನಡದಲ್ಲಿ 214, ಹಾಸನದಲ್ಲಿ 202 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. 15 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ಹಾಗೂ 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.52 ಲಕ್ಷ ದಾಟಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/prajavani-deccan-herald-covid-19-relief-fund-839457.html" itemprop="url">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ </a></p>.<p>ಕೊರೊನಾ ಸೋಂಕಿತರಲ್ಲಿ 86 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 4.13ಕ್ಕೆ ಏರಿಕೆಯಾಗಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ 13 ಹಾಗೂ ಬೆಂಗಳೂರಿನಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,308ಕ್ಕೆ ತಲುಪಿದೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 48,116ಕ್ಕೆ ಇಳಿಕೆಯಾಗಿದೆ. ಸೋಂಕಿತರಲ್ಲಿ 7,751 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.68 ಲಕ್ಷ ದಾಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಹೊಸದಾಗಿ 2,082 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. ಇವು ಕೋವಿಡ್ ಎರಡನೇ ಅಲೆಯ ಅವಧಿಯಲ್ಲಿ ವರದಿಯಾದ ಕನಿಷ್ಠ ಪ್ರಕರಣಗಳಾಗಿವೆ.</p>.<p>ಕಳೆದ ಮಾರ್ಚ್ ಮೂರನೇ ವಾರದ ಬಳಿಕ ಸೋಂಕಿತರ ಸಂಖ್ಯೆ ಏರುಗತಿ ಪಡೆದುಕೊಂಡಿತ್ತು. ಕಳೆದೊಂದು ತಿಂಗಳಿನಿಂದ ಈ ಸಂಖ್ಯೆ ಇಳಿಮುಖ ಮಾಡಿದೆ. ಒಂದು ದಿನದ ಅವಧಿಯಲ್ಲಿ 1.54 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 1.34ಕ್ಕೆ ಇಳಿಕೆಯಾಗಿದೆ. ಮೂರುವರೆ ತಿಂಗಳಲ್ಲಿ ವರದಿಯಾದ ಕನಿಷ್ಠ ದೃಢಪ್ರಮಾಣ ಇದಾಗಿದೆ.</p>.<p>ಬೆಂಗಳೂರಿನಲ್ಲಿ 481, ಮೈಸೂರಿನಲ್ಲಿ 227, ದಕ್ಷಿಣ ಕನ್ನಡದಲ್ಲಿ 214, ಹಾಸನದಲ್ಲಿ 202 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. 15 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ಹಾಗೂ 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.52 ಲಕ್ಷ ದಾಟಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/prajavani-deccan-herald-covid-19-relief-fund-839457.html" itemprop="url">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ </a></p>.<p>ಕೊರೊನಾ ಸೋಂಕಿತರಲ್ಲಿ 86 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 4.13ಕ್ಕೆ ಏರಿಕೆಯಾಗಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ 13 ಹಾಗೂ ಬೆಂಗಳೂರಿನಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,308ಕ್ಕೆ ತಲುಪಿದೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ 48,116ಕ್ಕೆ ಇಳಿಕೆಯಾಗಿದೆ. ಸೋಂಕಿತರಲ್ಲಿ 7,751 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.68 ಲಕ್ಷ ದಾಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>