ಕೋವಿಡ್ ಪೀಡಿತರಲ್ಲಿ 21 ಮಂದಿ ಮೃತಪಟ್ಟಿದ್ದಾರೆ.ಬೆಂಗಳೂರಿನಲ್ಲಿ ಐದು ಮಂದಿ, ಮೈಸೂರಿನಲ್ಲಿ ನಾಲ್ವರು, ದಕ್ಷಿಣ ಕನ್ನಡದಲ್ಲಿ ಮೂರು ಮಂದಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ಹಾಸನ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದಲ್ಲಿತಲಾ ಒಬ್ಬರು ಸಾವಿಗೀಡಾಗಿದ್ದಾರೆ.ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.05 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,486ಕ್ಕೆ ಏರಿಕೆಯಾಗಿದೆ.