<p><strong>ಬೆಂಗಳೂರು:</strong>ರಾಜ್ಯದಲ್ಲಿ ಭಾನುವಾರ ಸಂಜೆ 5ರಿಂದ ಸೋಮವಾರ ಸಂಜೆ 5 ಗಂಟೆ ವರೆಗೆ 1,105 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 738 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.</p>.<p>ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 19 ಸಾವು ಸಂಭವಿಸಿದೆ. ಇದರೊಂದಿಗೆ ಸಾವಿನ ಸಂಖ್ಯೆ 226ಕ್ಕೆ ಏರಿದೆ.</p>.<p>ರಾಜ್ಯದಲ್ಲಿ ಇದುವರೆಗೆ ಒಟ್ಟು 14,295 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ, 7,683 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ, 6,382 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. 268 ಸೋಂಕಿತರು ಐಸಿಯುನಲ್ಲಿದ್ದಾರೆ.</p>.<p>ಇಂದು 176 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.</p>.<p>ಬೆಂಗಳೂರಿನಲ್ಲಿಸೋಂಕಿತರ ಸಂಖ್ಯೆ 4,052ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 91ಕ್ಕೆ ಏರಿದೆ. 533 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನೂ 3,427ಪ್ರಕರಣಗಳು ಸಕ್ರಿಯವಾಗಿವೆ.</p>.<p>ಉಳಿದಂತೆ ಬಳ್ಳಾರಿಯಲ್ಲಿ 76,ದಕ್ಷಿಣ ಕನ್ನಡದಲ್ಲಿ 32, ಬೀದರ್ನಲ್ಲಿ 28, ಉತ್ತರ ಕನ್ನಡದಲ್ಲಿ 24, ಕಲಬುರಗಿಯಲ್ಲಿ 23, ವಿಜಯಪುರ–ಹಾಸನದಲ್ಲಿ ತಲಾ 22, ತುಮಕೂರು–ಉಡುಪಿಯಲ್ಲಿ ತಲಾ 18, ಧಾರವಾಡ–ಚಿಕ್ಕಮಗಳೂರಿನಲ್ಲಿ ತಲಾ 17, ಚಿಕ್ಕಬಳ್ಳಾಪುರದಲ್ಲಿ 15, ಯಾದಗಿರಿಯಲ್ಲಿ 9, ಮಂಡ್ಯದಲ್ಲಿ 8, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 5, ರಾಯಚೂರು–ಬಾಗಲಕೋಟೆ–ಗದಗ ಮತ್ತು ಕೋಲಾರದಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರದಲ್ಲಿ 3, ದಾವಣಗೆರೆ–ರಾಮನಗರ–ಚಿತ್ರದುರ್ಗದಲ್ಲಿ ತಲಾ 2, ಹಾವೇರಿ ಮತ್ತು ಕೊಡಗಿನಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದಲ್ಲಿ ಭಾನುವಾರ ಸಂಜೆ 5ರಿಂದ ಸೋಮವಾರ ಸಂಜೆ 5 ಗಂಟೆ ವರೆಗೆ 1,105 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 738 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.</p>.<p>ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 19 ಸಾವು ಸಂಭವಿಸಿದೆ. ಇದರೊಂದಿಗೆ ಸಾವಿನ ಸಂಖ್ಯೆ 226ಕ್ಕೆ ಏರಿದೆ.</p>.<p>ರಾಜ್ಯದಲ್ಲಿ ಇದುವರೆಗೆ ಒಟ್ಟು 14,295 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ, 7,683 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ, 6,382 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. 268 ಸೋಂಕಿತರು ಐಸಿಯುನಲ್ಲಿದ್ದಾರೆ.</p>.<p>ಇಂದು 176 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.</p>.<p>ಬೆಂಗಳೂರಿನಲ್ಲಿಸೋಂಕಿತರ ಸಂಖ್ಯೆ 4,052ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 91ಕ್ಕೆ ಏರಿದೆ. 533 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನೂ 3,427ಪ್ರಕರಣಗಳು ಸಕ್ರಿಯವಾಗಿವೆ.</p>.<p>ಉಳಿದಂತೆ ಬಳ್ಳಾರಿಯಲ್ಲಿ 76,ದಕ್ಷಿಣ ಕನ್ನಡದಲ್ಲಿ 32, ಬೀದರ್ನಲ್ಲಿ 28, ಉತ್ತರ ಕನ್ನಡದಲ್ಲಿ 24, ಕಲಬುರಗಿಯಲ್ಲಿ 23, ವಿಜಯಪುರ–ಹಾಸನದಲ್ಲಿ ತಲಾ 22, ತುಮಕೂರು–ಉಡುಪಿಯಲ್ಲಿ ತಲಾ 18, ಧಾರವಾಡ–ಚಿಕ್ಕಮಗಳೂರಿನಲ್ಲಿ ತಲಾ 17, ಚಿಕ್ಕಬಳ್ಳಾಪುರದಲ್ಲಿ 15, ಯಾದಗಿರಿಯಲ್ಲಿ 9, ಮಂಡ್ಯದಲ್ಲಿ 8, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 5, ರಾಯಚೂರು–ಬಾಗಲಕೋಟೆ–ಗದಗ ಮತ್ತು ಕೋಲಾರದಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರದಲ್ಲಿ 3, ದಾವಣಗೆರೆ–ರಾಮನಗರ–ಚಿತ್ರದುರ್ಗದಲ್ಲಿ ತಲಾ 2, ಹಾವೇರಿ ಮತ್ತು ಕೊಡಗಿನಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>