ಸ್ಥಳೀಯರ ಆಕ್ರೋಶ: ಸೋಂಕು ಮತ್ತೆ ತೀವ್ರವಾಗಿ ಹರಡಲಾರಂಭಿಸುತ್ತಿದ್ದಂತೆ ಶ್ರೀಕಂಠೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ದೈನಂದಿನ ಪೂಜೆ ಸಲ್ಲಿಸಲು ಅರ್ಚಕ ಸಮೂಹಕ್ಕಷ್ಟೇ ಅವಕಾಶವಿತ್ತು. ಆದರೆ, ಭಕ್ತರಿಗೆ ನಿರ್ಬಂಧವಿರುವ ಅವಧಿಯಲ್ಲೇ ವಿಜಯೇಂದ್ರ ದಂಪತಿ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಗುಲದ ಆಡಳಿತ ಮಂಡಳಿ ನಿರ್ಧಾರವನ್ನು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಟೀಕೆ ವ್ಯಕ್ತವಾಗಿದೆ.