<p><strong>ಬೆಂಗಳೂರು: </strong>ಬ್ಯಾಂಕ್ ಖಾತೆಯ ಜೊತೆ ಆಧಾರ ಜೋಡಣೆಯಾಗಿರುವ 1,91,684 ಬೀದಿಬದಿ ವ್ಯಾಪಾರಿಗಳ ಖಾತೆಗೆ ತಲಾ ₹ 2 ಸಾವಿರದಂತೆ ಒಟ್ಟು ₹ 38.33 ಕೋಟಿ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.</p>.<p>ಕೋವಿಡ್ ಎರಡನೇ ಅಲೆಯ ಆರ್ಥಿಕ ಪ್ಯಾಕೇಜ್ನಡಿ ಬೀದಿಬದಿ ವ್ಯಾಪಾರಿಗಳಿಗೆ ಸಹಾಯಧನ ಘೋಷಿಸಲಾಗಿದ್ದು, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿಬದಿ ವ್ಯಾಪಾರಿಗಳಿಗೆ ಈ ನೆರವು ಸಿಗಲಿದೆ.</p>.<p>ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ನಗರ ಸ್ಥಳೀಯಸಂಸ್ಥೆಗಳಿಂದ ನಡೆಸಿದ ಸಮೀಕ್ಷೆಯಲ್ಲಿ 2,16,439 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಅವರಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣಪತ್ರ ವಿತರಿಸಿ, ವ್ಯಾಪಾರದ ಮೂಲಸೌಕರ್ಯ ಕಲ್ಪಿಸಲಾಗಿದೆ. ಅಲ್ಲದೆ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಫಲಾನುಭವಿಗಳ ಪೈಕಿ ಆಧಾರ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ತಲಾ ₹ 2 ಸಾವಿರದಂತೆ ಒಟ್ಟು ₹ 38.33 ಕೋಟಿ ವರ್ಗಾಯಿಸಲಾಗುತ್ತಿದೆ’ ಎಂದರು.</p>.<p>‘ಬ್ಯಾಂಕ್ ಖಾತೆಗೆ ಆಧಾರ ಜೋಡಿಸದ ಫಲಾನುಭವಿಗಳಿಗೆ ಆಧಾರ್ ಜೋಡಣೆ ಮಾಡಿದ ನಂತರ ಸಹಾಯಧನ ಬಿಡುಗಡೆ ಮಾಡಲಾಗುವುದು. ಈಗಾಗಲೇ ನೋಂದಾಯಿಸಿರುವ ಬೀದಿಬದಿ ವ್ಯಾಪಾರಿಗಳು ಈ ಸಹಾಯಧನ ಪಡೆಯಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಈ ಪ್ಯಾಕೇಜ್ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು ಸಂಬಂಧಿಸಿದ ಬ್ಯಾಂಕಿನವರಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ತಲಾ ₹ 10 ಸಾವಿರ ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯ ನೀಡಲಾಗಿದೆ. ಈವರಗೆ ಈ ಯೋಜನೆಯಡಿ ₹ 107.92 ಕೋಟಿ ಸಾಲ ವಿತರಿಸಲಾಗಿದೆ’ ಎಂದೂ ಮುಖ್ಯಮಂತ್ರಿ ತಿಳಿಸಿದರು.</p>.<p>‘ಕೋವಿಡ್ ಎರಡನೇ ಅಲೆ ತೀವ್ರವಾಗಿ ಬಾಧಿಸಿದೆ. ಇಂಥ ಕಠಿಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ವಿವಿಧ ವಲಯಗಳ ಕಾರ್ಮಿಕರು, ರೈತರು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರ್ಚಕರು ಮತ್ತಿತರರಿಗೆ ಎರಡು ಹಂತದಲ್ಲಿ ಸರ್ಕಾರ ₹ 1,700 ಕೋಟಿಗೂ ಹೆಚ್ಚಿನ ಧನ ಸಹಾಯ ಘೋಷಿಸಿದ್ದು, ಈಗಾಗಲೇ ವಿವಿಧ ವರ್ಗದ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ಮಾಡಲಾಗಿದೆ’ ಎಂದರು.</p>.<p>‘ಬೀದಿಬದಿ ವ್ಯಾಪಾರಿಗಳು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಈ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ’ ಎಂದರು.</p>.<p>ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿ, ‘ಬೀದಿಬದಿ ವ್ಯಾಪಾರಿಗಳಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. 2.14 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಅರ್ಜಿ ಪಡೆಯದೇ ನೇರವಾಗಿ ಸಹಾಯಧನ ವಿತರಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಫಲಾನುಭವಿಗಳಾದ ನಂಜಪ್ಪ ಹಾಗೂ ಲಕ್ಷ್ಮಮ್ಮ ಅವರು ಪಿ.ಎಂ. ಸ್ವನಿಧಿ ಅಡಿ ₹ 10 ಸಾವಿರ ಸಾಲ ಸೌಲಭ್ಯ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ನೀಡುತ್ತಿರುವ ₹ 2 ಸಾವಿರ ನೆರವಿನಿಂದ ಅನುಕೂಲವಾಗಿದೆ’ ಎಂದೂ ತಿಳಿಸಿದರು.</p>.<p>ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಇ-ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಯ ಕಾರ್ಯದರ್ಶಿ ಸೆಲ್ವಕುಮಾರ್, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಿರ್ದೇಶಕಿ ಎನ್. ಮಂಜುಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬ್ಯಾಂಕ್ ಖಾತೆಯ ಜೊತೆ ಆಧಾರ ಜೋಡಣೆಯಾಗಿರುವ 1,91,684 ಬೀದಿಬದಿ ವ್ಯಾಪಾರಿಗಳ ಖಾತೆಗೆ ತಲಾ ₹ 2 ಸಾವಿರದಂತೆ ಒಟ್ಟು ₹ 38.33 ಕೋಟಿ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.</p>.<p>ಕೋವಿಡ್ ಎರಡನೇ ಅಲೆಯ ಆರ್ಥಿಕ ಪ್ಯಾಕೇಜ್ನಡಿ ಬೀದಿಬದಿ ವ್ಯಾಪಾರಿಗಳಿಗೆ ಸಹಾಯಧನ ಘೋಷಿಸಲಾಗಿದ್ದು, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿಬದಿ ವ್ಯಾಪಾರಿಗಳಿಗೆ ಈ ನೆರವು ಸಿಗಲಿದೆ.</p>.<p>ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ನಗರ ಸ್ಥಳೀಯಸಂಸ್ಥೆಗಳಿಂದ ನಡೆಸಿದ ಸಮೀಕ್ಷೆಯಲ್ಲಿ 2,16,439 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಅವರಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣಪತ್ರ ವಿತರಿಸಿ, ವ್ಯಾಪಾರದ ಮೂಲಸೌಕರ್ಯ ಕಲ್ಪಿಸಲಾಗಿದೆ. ಅಲ್ಲದೆ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಫಲಾನುಭವಿಗಳ ಪೈಕಿ ಆಧಾರ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ತಲಾ ₹ 2 ಸಾವಿರದಂತೆ ಒಟ್ಟು ₹ 38.33 ಕೋಟಿ ವರ್ಗಾಯಿಸಲಾಗುತ್ತಿದೆ’ ಎಂದರು.</p>.<p>‘ಬ್ಯಾಂಕ್ ಖಾತೆಗೆ ಆಧಾರ ಜೋಡಿಸದ ಫಲಾನುಭವಿಗಳಿಗೆ ಆಧಾರ್ ಜೋಡಣೆ ಮಾಡಿದ ನಂತರ ಸಹಾಯಧನ ಬಿಡುಗಡೆ ಮಾಡಲಾಗುವುದು. ಈಗಾಗಲೇ ನೋಂದಾಯಿಸಿರುವ ಬೀದಿಬದಿ ವ್ಯಾಪಾರಿಗಳು ಈ ಸಹಾಯಧನ ಪಡೆಯಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಈ ಪ್ಯಾಕೇಜ್ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು ಸಂಬಂಧಿಸಿದ ಬ್ಯಾಂಕಿನವರಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ತಲಾ ₹ 10 ಸಾವಿರ ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯ ನೀಡಲಾಗಿದೆ. ಈವರಗೆ ಈ ಯೋಜನೆಯಡಿ ₹ 107.92 ಕೋಟಿ ಸಾಲ ವಿತರಿಸಲಾಗಿದೆ’ ಎಂದೂ ಮುಖ್ಯಮಂತ್ರಿ ತಿಳಿಸಿದರು.</p>.<p>‘ಕೋವಿಡ್ ಎರಡನೇ ಅಲೆ ತೀವ್ರವಾಗಿ ಬಾಧಿಸಿದೆ. ಇಂಥ ಕಠಿಣ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ವಿವಿಧ ವಲಯಗಳ ಕಾರ್ಮಿಕರು, ರೈತರು, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರ್ಚಕರು ಮತ್ತಿತರರಿಗೆ ಎರಡು ಹಂತದಲ್ಲಿ ಸರ್ಕಾರ ₹ 1,700 ಕೋಟಿಗೂ ಹೆಚ್ಚಿನ ಧನ ಸಹಾಯ ಘೋಷಿಸಿದ್ದು, ಈಗಾಗಲೇ ವಿವಿಧ ವರ್ಗದ ಕಾರ್ಮಿಕರಿಗೆ ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ಮಾಡಲಾಗಿದೆ’ ಎಂದರು.</p>.<p>‘ಬೀದಿಬದಿ ವ್ಯಾಪಾರಿಗಳು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ಈ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ’ ಎಂದರು.</p>.<p>ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿ, ‘ಬೀದಿಬದಿ ವ್ಯಾಪಾರಿಗಳಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. 2.14 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಅರ್ಜಿ ಪಡೆಯದೇ ನೇರವಾಗಿ ಸಹಾಯಧನ ವಿತರಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಫಲಾನುಭವಿಗಳಾದ ನಂಜಪ್ಪ ಹಾಗೂ ಲಕ್ಷ್ಮಮ್ಮ ಅವರು ಪಿ.ಎಂ. ಸ್ವನಿಧಿ ಅಡಿ ₹ 10 ಸಾವಿರ ಸಾಲ ಸೌಲಭ್ಯ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ನೀಡುತ್ತಿರುವ ₹ 2 ಸಾವಿರ ನೆರವಿನಿಂದ ಅನುಕೂಲವಾಗಿದೆ’ ಎಂದೂ ತಿಳಿಸಿದರು.</p>.<p>ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಇ-ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಯ ಕಾರ್ಯದರ್ಶಿ ಸೆಲ್ವಕುಮಾರ್, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಿರ್ದೇಶಕಿ ಎನ್. ಮಂಜುಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>