ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೆರೆಯ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ದೇವೇಂದ್ರ ಫಡ್ನವೀಸ್ ಅವರು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಶಂಶಿಸಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅವರು ಕೂಡ ಸರ್ಕಾರಕ್ಕೆ ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು. ‘ಕೋವಿಡ್–19 ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಕ್ರಮಗಳನ್ನು ವಿವಿಧ ರಾಷ್ಟ್ರಗಳು ಪ್ರಶಂಶಿಸುತ್ತಿದ್ದರೆ, ಸ್ಥಳೀಯ ಕೆಲವು ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದು ದುರ್ದೈವ’ ಎಂದು ವಿಷಾದ ವ್ಯಕ್ತಪಡಿಸಿದರು.