ಬೆಂಗಳೂರು:ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು, ತಜ್ಞರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಸೇವಾ ಸಿಬ್ಬಂದಿಗೆ ರಾಜ್ಯ ಸರ್ಕಾರವು ಕೋವಿಡ್ ವಿಶೇಷ ಹೆಚ್ಚುವರಿ ಭತ್ಯೆ ನೀಡಲಿದೆ. ಮುಂದಿನ 6 ತಿಂಗಳು ಅವಧಿಗೆ ಮಾತ್ರ ಈ ಹೆಚ್ಚುವರಿ ಭತ್ಯೆ ನೀಡಲಾಗುತ್ತದೆ.