<p><strong>ಬೆಂಗಳೂರು: </strong>ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ನ್ಯಾಯಾಲಯದ ಕಲಾಪಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ವೈಯಕ್ತಿಕವಾಗಿ ಮನವಿ ಮಾಡಿದರು. ನ್ಯಾಯಾಲಯಗಳಲ್ಲಿರುವ 45 ವರ್ಷಕ್ಕೂ ಮೇಲ್ಪಟ್ಟ ಎಲ್ಲ ಸಿಬ್ಬಂದಿಯೂ ಕೂಡಲೇ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಿದರು.</p>.<p>ವಕೀಲರು ಕೋವಿಡ್ಗೆ ತುತ್ತಾಗಿರುವ ಕಾರಣದಿಂದ ಕಳೆದ ಕೆಲ ದಿನಗಳಲ್ಲಿ ಹಲವು ವಿಚಾರಣೆಗಳನ್ನು ಮುಂದೂಡಿದ್ದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಮೂರ್ತಿ ಅವರು ಮೌಖಿಕವಾಗಿ ಈ ಮನವಿ ಮಾಡಿದರು.</p>.<p>‘ಬೆಂಗಳೂರಿನ ಪ್ರಧಾನ ಪೀಠದ ಮೊದಲ 10 ನ್ಯಾಯಾಲಯಗಳಲ್ಲಿ ಈಗಾಗಲೇ ಗುಣಮಟ್ಟದ ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ. ಉಳಿದ ಎಲ್ಲ ನ್ಯಾಯಾಲಯದ ಸಭಾಂಗಣಗಳಲ್ಲೂ ಇದೇ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಹೈಕೋರ್ಟ್ನಲ್ಲಿ ಅಳವಡಿಸಿಕೊಂಡಿರುವ ಮಾದರಿಯನ್ನು ಬೇರೆ ಹೈಕೋರ್ಟ್ಗಳಲ್ಲೂ ಅನುಸರಿಸಲು ಸಲಹೆ ಪಡೆಯುತ್ತಿವೆ’ ಎಂದು ಹೇಳಿದರು.</p>.<p>‘ನ್ಯಾಯಾಲಯಕ್ಕೆ ಹಾಜರಾಗದೆ ವಿಡಿಯೊ ಕಾನ್ಫರೆನ್ಸ್ನಲ್ಲಿ ಇನ್ನೂ ಪರಿಣಾಮಕಾರಿಯಾಗಿ ವಕೀಲರು ವಾದ ಮಾಡಲು ಸಾಧ್ಯವಿದೆ’ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರೂ ಅಭಿಪ್ರಾಯಪಟ್ಟರು.</p>.<p>‘ಸಾರ್ವಜನಿಕರು, ದಾವೆ ಹೂಡುವವರು, ವಕೀಲರು ನಿಯಮಿತವಾಗಿ ನ್ಯಾಯಾಲಯ ಮತ್ತು ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ, ಎಲ್ಲ ಅರ್ಹ ಸಿಬ್ಬಂದಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ನ್ಯಾಯಾಲಯದ ಕಲಾಪಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ವೈಯಕ್ತಿಕವಾಗಿ ಮನವಿ ಮಾಡಿದರು. ನ್ಯಾಯಾಲಯಗಳಲ್ಲಿರುವ 45 ವರ್ಷಕ್ಕೂ ಮೇಲ್ಪಟ್ಟ ಎಲ್ಲ ಸಿಬ್ಬಂದಿಯೂ ಕೂಡಲೇ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಿದರು.</p>.<p>ವಕೀಲರು ಕೋವಿಡ್ಗೆ ತುತ್ತಾಗಿರುವ ಕಾರಣದಿಂದ ಕಳೆದ ಕೆಲ ದಿನಗಳಲ್ಲಿ ಹಲವು ವಿಚಾರಣೆಗಳನ್ನು ಮುಂದೂಡಿದ್ದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಮೂರ್ತಿ ಅವರು ಮೌಖಿಕವಾಗಿ ಈ ಮನವಿ ಮಾಡಿದರು.</p>.<p>‘ಬೆಂಗಳೂರಿನ ಪ್ರಧಾನ ಪೀಠದ ಮೊದಲ 10 ನ್ಯಾಯಾಲಯಗಳಲ್ಲಿ ಈಗಾಗಲೇ ಗುಣಮಟ್ಟದ ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ. ಉಳಿದ ಎಲ್ಲ ನ್ಯಾಯಾಲಯದ ಸಭಾಂಗಣಗಳಲ್ಲೂ ಇದೇ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಹೈಕೋರ್ಟ್ನಲ್ಲಿ ಅಳವಡಿಸಿಕೊಂಡಿರುವ ಮಾದರಿಯನ್ನು ಬೇರೆ ಹೈಕೋರ್ಟ್ಗಳಲ್ಲೂ ಅನುಸರಿಸಲು ಸಲಹೆ ಪಡೆಯುತ್ತಿವೆ’ ಎಂದು ಹೇಳಿದರು.</p>.<p>‘ನ್ಯಾಯಾಲಯಕ್ಕೆ ಹಾಜರಾಗದೆ ವಿಡಿಯೊ ಕಾನ್ಫರೆನ್ಸ್ನಲ್ಲಿ ಇನ್ನೂ ಪರಿಣಾಮಕಾರಿಯಾಗಿ ವಕೀಲರು ವಾದ ಮಾಡಲು ಸಾಧ್ಯವಿದೆ’ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರೂ ಅಭಿಪ್ರಾಯಪಟ್ಟರು.</p>.<p>‘ಸಾರ್ವಜನಿಕರು, ದಾವೆ ಹೂಡುವವರು, ವಕೀಲರು ನಿಯಮಿತವಾಗಿ ನ್ಯಾಯಾಲಯ ಮತ್ತು ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ, ಎಲ್ಲ ಅರ್ಹ ಸಿಬ್ಬಂದಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>