‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ತೀವ್ರ ಹಾಗೂ ಗಂಭೀರವಾಗಿ ಅಸ್ವಸ್ಥಗೊಂಡವರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿರುತ್ತದೆ. ಹೀಗಾಗಿ, ವಿದೇಶದಿಂದ ಬಂದು ಸೋಂಕಿತರಾದ ಲಕ್ಷಣ ರಹಿತರು ಹಾಗೂ ಸೌಮ್ಯ ಲಕ್ಷಣ ಹೊಂದಿರುವವರಿಗೆ ಸರ್ಕಾರಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಪ್ರತ್ಯೇಕ ವಾಸಕ್ಕೆ ಒಳಪಡಿಸಬೇಕು. ಈ ಕೇಂದ್ರಗಳಲ್ಲಿ ಆರೈಕೆಗೆ ಒಳಗಾದವರು ಹಣ ಪಾವತಿಸಬೇಕಾಗಿಲ್ಲ. ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ತಾರಾ ಹೋಟೆಲ್ಗಳಲ್ಲಿಯೂ ಹಣ ಪಾವತಿ ಆಧಾರದಲ್ಲಿ ಪ್ರತ್ಯೇಕ ವಾಸಕ್ಕೆ ಒಳಪಡಬಹುದು. ಪ್ರತ್ಯೇಕ ವಾಸಕ್ಕೆ ಒಳಗಾದವರಿಗೆಸೋಂಕಿನ ಲಕ್ಷಣಗಳು ಬಹಿರಂಗವಾಗಿ ಗೋಚರಿಸಿದರೆ ಆಸ್ಪತ್ರೆಗೆ ಸ್ಥಳಾಂತರ ಮಾಡಬೇಕು’ ಎಂದು ಸೂಚಿಸಿದ್ದಾರೆ.