<p><strong>ಬೆಂಗಳೂರು: </strong>ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರು ನಗರವನ್ನು 8 ವಲಯಗಳನ್ನಾಗಿ ಮಾಡಿ, ಎಂಟು ಸಚಿವರಿಗೆ ಉಸ್ತುವಾರಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.</p>.<p>ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಎಂಟು ಸಚಿವರ ಜತೆ ಚರ್ಚೆ ನಡೆಸಿ ಬಳಿಕ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಎಂಟು ಸಚಿವರು ನಗರದ ಪರಿಸ್ಥಿತಿಯನ್ನು ಅಧ್ಯಯನ ಮಾಡಿ, ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಅವರು ಹೇಳಿದರು.</p>.<p>ರಾಜ್ಯದ ಎಲ್ಲ ಕಡೆಗಳಲ್ಲಿ ಬೇಗನೇ ಪರೀಕ್ಷೆ ಮಾಡಿ, ಬೇಗನೇ ಫಲಿತಾಂಶ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಹೈಫ್ಲೊ ಆಕ್ಸಿಜನ್ ಅಳವಡಿಸುವುದು ಮತ್ತು ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡಲು ತೀರ್ಮಾನಿಸಲಾಯಿತು ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/coronavirus-covid-karnataka-govt-pandemic-madhuswami-bsy-lockdown-742638.html" target="_blank">ಕೊರೊನಾ ನಮ್ಮ ಕೈಮೀರಿದೆ, ನಿಗ್ರಹ ಕಷ್ಟವಾಗುತ್ತಿದೆ: ಸಚಿವ ಜೆ.ಸಿ.ಮಾಧುಸ್ವಾಮಿ</a></strong></p>.<p><strong>ಗುತ್ತಿಗೆ ವೈದ್ಯರಿಗೆ ಕೃಪಾಂಕ ಹೆಚ್ಚಳ:</strong>ಗುತ್ತಿಗೆ ವೈದ್ಯರನ್ನು ಕಾಯಂಗೊಳಿಸುವ ಉದ್ದೇಶದಿಂದ ಕೃಪಾಂಕವನ್ನು 2.5 ರಿಂದ 30 ರವರೆಗೆ ನೀಡಲು ತೀರ್ಮಾನಿಸಲಾಗಿದೆ. 6 ತಿಂಗಳು ಸೇವೆ ಮಾಡಿದವರಿಗೆ 2.5 ಅಂಕ ಸಿಗುತ್ತದೆ. ಸೇವೆಯ ಕಾಲಾವಧಿ ಹೆಚ್ಚಾದಷ್ಟೂ ಕೃಪಾಂಕವೂ ಹೆಚ್ಚುತ್ತದೆ. ವಯೋಮಿತಿಯ ನಿರ್ಬಂಧವನ್ನು 21 ರಿಂದ 26 ವರ್ಷಗಳಿಗೆ ಏರಿಸಲಾಗಿದೆ. ಆಯುಷ್ ವೈದ್ಯರಿಗೂ ಇದು ಅನ್ವಯವಾಗುತ್ತದೆ ಎಂದು ಮಾಧುಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರು ನಗರವನ್ನು 8 ವಲಯಗಳನ್ನಾಗಿ ಮಾಡಿ, ಎಂಟು ಸಚಿವರಿಗೆ ಉಸ್ತುವಾರಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.</p>.<p>ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಎಂಟು ಸಚಿವರ ಜತೆ ಚರ್ಚೆ ನಡೆಸಿ ಬಳಿಕ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಎಂಟು ಸಚಿವರು ನಗರದ ಪರಿಸ್ಥಿತಿಯನ್ನು ಅಧ್ಯಯನ ಮಾಡಿ, ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಅವರು ಹೇಳಿದರು.</p>.<p>ರಾಜ್ಯದ ಎಲ್ಲ ಕಡೆಗಳಲ್ಲಿ ಬೇಗನೇ ಪರೀಕ್ಷೆ ಮಾಡಿ, ಬೇಗನೇ ಫಲಿತಾಂಶ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಹೈಫ್ಲೊ ಆಕ್ಸಿಜನ್ ಅಳವಡಿಸುವುದು ಮತ್ತು ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡಲು ತೀರ್ಮಾನಿಸಲಾಯಿತು ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/coronavirus-covid-karnataka-govt-pandemic-madhuswami-bsy-lockdown-742638.html" target="_blank">ಕೊರೊನಾ ನಮ್ಮ ಕೈಮೀರಿದೆ, ನಿಗ್ರಹ ಕಷ್ಟವಾಗುತ್ತಿದೆ: ಸಚಿವ ಜೆ.ಸಿ.ಮಾಧುಸ್ವಾಮಿ</a></strong></p>.<p><strong>ಗುತ್ತಿಗೆ ವೈದ್ಯರಿಗೆ ಕೃಪಾಂಕ ಹೆಚ್ಚಳ:</strong>ಗುತ್ತಿಗೆ ವೈದ್ಯರನ್ನು ಕಾಯಂಗೊಳಿಸುವ ಉದ್ದೇಶದಿಂದ ಕೃಪಾಂಕವನ್ನು 2.5 ರಿಂದ 30 ರವರೆಗೆ ನೀಡಲು ತೀರ್ಮಾನಿಸಲಾಗಿದೆ. 6 ತಿಂಗಳು ಸೇವೆ ಮಾಡಿದವರಿಗೆ 2.5 ಅಂಕ ಸಿಗುತ್ತದೆ. ಸೇವೆಯ ಕಾಲಾವಧಿ ಹೆಚ್ಚಾದಷ್ಟೂ ಕೃಪಾಂಕವೂ ಹೆಚ್ಚುತ್ತದೆ. ವಯೋಮಿತಿಯ ನಿರ್ಬಂಧವನ್ನು 21 ರಿಂದ 26 ವರ್ಷಗಳಿಗೆ ಏರಿಸಲಾಗಿದೆ. ಆಯುಷ್ ವೈದ್ಯರಿಗೂ ಇದು ಅನ್ವಯವಾಗುತ್ತದೆ ಎಂದು ಮಾಧುಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>