ಇದಕ್ಕೆ ಪ್ರತಿಕ್ರಿಯಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, 'ಕಳೆದ ವರ್ಷದ ಲಾಕ್ಡೌನ್ ಮತ್ತು ನಂತರದ ನಿರ್ಬಂಧಗಳಿಂದ ಚಿತ್ರರಂಗ ಸೇರಿದಂತೆ ಅನೇಕ ಉದ್ದಿಮೆ, ವ್ಯಾಪಾರ, ವಹಿವಾಟುಗಳಿಗೆ ತೊಂದರೆ ಆಗಿರುವುದರ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಕಳಕಳಿಯೂ ಇದೆ. ಆದರೆ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಮತ್ತೆ ಎದುರಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.