ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಅವರು, 'ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಅವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.