ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಜಾನ್ : ಮಸೀದಿಯಲ್ಲಿ ಪ್ರಾರ್ಥನೆಗೆ ನಿರ್ಬಂಧ

ಕೇಂದ್ರದ ಸೂಚನೆ ಕಟ್ಟುನಿಟ್ಟು ಪಾಲನೆ–ಸರ್ಕಾರ ಆದೇಶ
Last Updated 16 ಏಪ್ರಿಲ್ 2020, 18:41 IST
ಅಕ್ಷರ ಗಾತ್ರ

ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್‌ ವ್ರತದ ತಿಂಗಳುಇದೇ 24 ಅಥವಾ 25ರಂದು ಆರಂಭವಾಗಲಿದ್ದು, ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಮಸೀದಿ ಅಥವಾ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು ಎಂದು ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್‌ ಮತ್ತು ಹಜ್‌ ಇಲಾಖೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದು ಮೇ 3ರವರೆಗೆ ಇದು ಜಾರಿಯಲ್ಲಿರುತ್ತದೆ.

ಮಸೀದಿ ಅಥವಾ ದರ್ಗಾಗಳಲ್ಲಿ ಇಮಾಮ್‌ಗಳು ಮತ್ತು ಸಿಬ್ಬಂದಿ ಮಾತ್ರ ನಮಾಜ್‌ ಮಾಡಬಹುದು, ಸಾರ್ವಜನಿಕರು
ಬರುವುದಕ್ಕೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ.

ಇದೇ ಆದೇಶಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರೂ ಆದೇಶ ಹೊರಡಿಸಿ, ರಂಜಾನ್‌ ಅವಧಿಯಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಮೂರು ಭಾಷೆಗಳಲ್ಲಿ ಧ್ವನಿಸುರುಳಿ ಸಿದ್ಧಪಡಿಸಿ, ಪ್ರತಿದಿನ ನಾಲ್ಕು ಬಾರಿ ಪ್ರಚಾರ ಮಾಡಬೇಕು ಎಂದು ಸೂಚಿಸಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲಿ ಇಫ್ತಾರ್‌, ಸಾಮೂಹಿಕ ಪ್ರಾರ್ಥನೆಗಳನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಕರ್ನಾಟಕ ಇಮಾರತ್‌–ಇ–ಶರಿಯಾ ಕೂಡಾ ಇದೇ 14ರಂದು ನಿಯಮ ರೂಪಿಸಿದೆ. ಅದನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಲಾಗಿದೆ.

ಈ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT