<p><strong>ಬೆಂಗಳೂರು</strong>:ಲಾಕ್ಡೌನ್ ಸಮಯದಲ್ಲಿ ಜನರು ಮನೆ ಬಿಟ್ಟು ಹೊರ ಹೆಜ್ಜೆ ಹಾಕದಂತೆ ತಡೆಯುವ ನಿಟ್ಟಿನಲ್ಲಿ ಇಷ್ಟು ದಿನ ಲಾಠಿ ಬೀಸುತ್ತಿದ್ದ ಪೊಲೀಸರು ಈಗ ಮೃದುವಾಗಿದ್ದಾರೆ.</p>.<p>ಹೊರ ಬರುವ ಜನರಿಗೆ ಮನೆ ಒಳಗೆ ಇರುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.</p>.<p>ಲಾಕ್ಡೌನ್ ನಿಯಮ ಉಲ್ಲಂಘಿಸಿವರಿಗೆ ಲಾಠಿ ಬೀಸುವ ಹೊರತಾಗಿ ಶಿಕ್ಷೆಯ ಹೊಸ ಮಾರ್ಗಗಳನ್ನು ಪೊಲೀಸರು ಅನುಸರಿಸುತ್ತಿದ್ದಾರೆ.</p>.<p>ಲಾಕ್ಡೌನ್ ಸಂದರ್ಭದಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುತುವರ್ಜಿ ವಹಿಸಿರುವ ಪೊಲೀಸರು ಹೊರ ಬರುವ ಜನರಿಗೆ ಮನೆಯಲ್ಲೇ ಉಳಿಯುವಂತೆ ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದಾರೆ.</p>.<p>ಲಾಕ್ಡೌನ್ ನಿಯಮ ಧಿಕ್ಕರಿಸುವವರಿಗೆ ಮೆಡಿಕಲ್ ಶಾಪ್ ಮತ್ತು ದಿನಸಿ ಅಂಗಡಿಗಳ ಮುಂದೆ ಚೌಕ ಅಥವಾ ವೃತ್ತಗಳನ್ನು ಬರೆಯುವ ಶಿಕ್ಷೆ ನೀಡುತ್ತಿದ್ದಾರೆ. ಕೆಲ ಪೊಲೀಸರು ಸಿಟ್ಅಪ್ಸ್ ಶಿಕ್ಷೆಯನ್ನೂ ಕೊಡುತ್ತಿದ್ದಾರೆ.</p>.<p>ದೇಶದಲ್ಲಿ ಲಾಕ್ಡೌನ್ ಘೋಷಣೆಯಾದ ನಂತರ ಮನೆ ಬಿಟ್ಟು ಹೊರಬಂದ ಜನರ ಮೇಲೆ ಲಾಠಿ ಪ್ರಹಾರ ನಡೆಸಲಾಯಿತು. ಪೊಲೀಸರ ಈ ಕ್ರಮವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆ ಕಾರಣ ಶಿಕ್ಷೆ ನೀಡುವ ತಂತ್ರಗಳನ್ನು ಪೊಲೀಸರು ಬದಲಿಸಿಕೊಂಡಿದ್ದಾರೆ.</p>.<p>ತಮ್ಮ ಅಧಿಕಾರಿಗಳು ಜನರನ್ನು ಅನಗತ್ಯವಾಗಿ ಹೊಡೆಯಬಾರದು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹೇಳಿದ್ದಾರೆ.</p>.<p>ಜನರನ್ನು ಚದುರಿಸುವಾಗ ಲಾಠಿ ಬಳಸದಂತೆ ಕಾನ್ಸ್ಟೆಬಲ್ಗಳು ಮತ್ತು ಇತರ ಅಧಿಕಾರಿಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಎನ್.ಶಶಿಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ಲಾಕ್ಡೌನ್ ಸಮಯದಲ್ಲಿ ಜನರು ಮನೆ ಬಿಟ್ಟು ಹೊರ ಹೆಜ್ಜೆ ಹಾಕದಂತೆ ತಡೆಯುವ ನಿಟ್ಟಿನಲ್ಲಿ ಇಷ್ಟು ದಿನ ಲಾಠಿ ಬೀಸುತ್ತಿದ್ದ ಪೊಲೀಸರು ಈಗ ಮೃದುವಾಗಿದ್ದಾರೆ.</p>.<p>ಹೊರ ಬರುವ ಜನರಿಗೆ ಮನೆ ಒಳಗೆ ಇರುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.</p>.<p>ಲಾಕ್ಡೌನ್ ನಿಯಮ ಉಲ್ಲಂಘಿಸಿವರಿಗೆ ಲಾಠಿ ಬೀಸುವ ಹೊರತಾಗಿ ಶಿಕ್ಷೆಯ ಹೊಸ ಮಾರ್ಗಗಳನ್ನು ಪೊಲೀಸರು ಅನುಸರಿಸುತ್ತಿದ್ದಾರೆ.</p>.<p>ಲಾಕ್ಡೌನ್ ಸಂದರ್ಭದಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುತುವರ್ಜಿ ವಹಿಸಿರುವ ಪೊಲೀಸರು ಹೊರ ಬರುವ ಜನರಿಗೆ ಮನೆಯಲ್ಲೇ ಉಳಿಯುವಂತೆ ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದಾರೆ.</p>.<p>ಲಾಕ್ಡೌನ್ ನಿಯಮ ಧಿಕ್ಕರಿಸುವವರಿಗೆ ಮೆಡಿಕಲ್ ಶಾಪ್ ಮತ್ತು ದಿನಸಿ ಅಂಗಡಿಗಳ ಮುಂದೆ ಚೌಕ ಅಥವಾ ವೃತ್ತಗಳನ್ನು ಬರೆಯುವ ಶಿಕ್ಷೆ ನೀಡುತ್ತಿದ್ದಾರೆ. ಕೆಲ ಪೊಲೀಸರು ಸಿಟ್ಅಪ್ಸ್ ಶಿಕ್ಷೆಯನ್ನೂ ಕೊಡುತ್ತಿದ್ದಾರೆ.</p>.<p>ದೇಶದಲ್ಲಿ ಲಾಕ್ಡೌನ್ ಘೋಷಣೆಯಾದ ನಂತರ ಮನೆ ಬಿಟ್ಟು ಹೊರಬಂದ ಜನರ ಮೇಲೆ ಲಾಠಿ ಪ್ರಹಾರ ನಡೆಸಲಾಯಿತು. ಪೊಲೀಸರ ಈ ಕ್ರಮವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆ ಕಾರಣ ಶಿಕ್ಷೆ ನೀಡುವ ತಂತ್ರಗಳನ್ನು ಪೊಲೀಸರು ಬದಲಿಸಿಕೊಂಡಿದ್ದಾರೆ.</p>.<p>ತಮ್ಮ ಅಧಿಕಾರಿಗಳು ಜನರನ್ನು ಅನಗತ್ಯವಾಗಿ ಹೊಡೆಯಬಾರದು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹೇಳಿದ್ದಾರೆ.</p>.<p>ಜನರನ್ನು ಚದುರಿಸುವಾಗ ಲಾಠಿ ಬಳಸದಂತೆ ಕಾನ್ಸ್ಟೆಬಲ್ಗಳು ಮತ್ತು ಇತರ ಅಧಿಕಾರಿಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಎನ್.ಶಶಿಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>