<p><strong>ಬೆಂಗಳೂರು: </strong>‘ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸ್ವಂತ ತೋಟ, ಜಮೀನಿನಲ್ಲೂ ಅನುಮತಿ ನೀಡಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ತೋಟದಲ್ಲಿ, ಜಮೀನಿನಲ್ಲಿ ಮಾರ್ಗಸೂಚಿ ಪ್ರಕಾರ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<p>‘ತಾವರೆಕೆರೆ ಬಳಿ ತಾತ್ಕಾಲಿಕವಾಗಿ ನಾಲ್ಕು ಎಕರೆ ಜಾಗದಲ್ಲಿ ಶವ ಸುಡುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಗುರುವಾರ ಬೆಳಿಗ್ಗೆಯಿಂದ 50ರಿಂದ 60 ಮೃತದೇಹಗಳನ್ನು ಸಂಪ್ರದಾಯದ ಪ್ರಕಾರ ಸುಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ನೀಲಗಿರಿ ತೋಪು ಖರೀದಿ ಮಾಡಿ ಕಟ್ಟಿಗೆ ಸಂಗ್ರಹ ಕೂಡ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಸಮಸ್ಯೆ ಕಂಡುಬಂದಲ್ಲಿ ಅದನ್ನು ಅಲ್ಲಿಯೇ ಬಗೆಹರಿಸಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಂಬುಲೆನ್ಸ್ ಚಾಲಕರು ಹೆಚ್ಚಿನ ಹಣ ವಸೂಲಿ ಮಾಡಿದರೆ ಅಂಥವರನ್ನು ಬಂಧಿಸುತ್ತೇವೆ. ಈ ಬಗ್ಗೆ ಗೃಹ ಸಚಿವರ ಜೊತೆಗೂ ಮಾತನಾಡಿದ್ದೇನೆ’ ಎಂದರು.</p>.<p>‘ಬೆಂಗಳೂರು ಸುತ್ತಮುತ್ತಲಿನ 20 ಕಿಲೊ ಮೀಟರ್ನಿಂದ ಎಲ್ಲರೂ ಶವ ಸಂಸ್ಕಾರಕ್ಕೆ ಇಲ್ಲಿಗೇ ಬರುತ್ತಿದ್ದಾರೆ. ಸುಡಬೇಕು ಎಂಬ ಕಾರಣಕ್ಕೆ ಇಲ್ಲಿಗೇ ತರುತ್ತಿದ್ದಾರೆ. ಈ ಕಾರಣದಿಂದ ಬೆಂಗಳೂರು ನಗರ ವ್ಯಾಪ್ತಿಯ ಚಿತಾ<br />ಗಾರಗಳಲ್ಲಿ ಮೃತದೇಹಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸ್ವಂತ ತೋಟ, ಜಮೀನಿನಲ್ಲೂ ಅನುಮತಿ ನೀಡಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ತೋಟದಲ್ಲಿ, ಜಮೀನಿನಲ್ಲಿ ಮಾರ್ಗಸೂಚಿ ಪ್ರಕಾರ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<p>‘ತಾವರೆಕೆರೆ ಬಳಿ ತಾತ್ಕಾಲಿಕವಾಗಿ ನಾಲ್ಕು ಎಕರೆ ಜಾಗದಲ್ಲಿ ಶವ ಸುಡುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಗುರುವಾರ ಬೆಳಿಗ್ಗೆಯಿಂದ 50ರಿಂದ 60 ಮೃತದೇಹಗಳನ್ನು ಸಂಪ್ರದಾಯದ ಪ್ರಕಾರ ಸುಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ನೀಲಗಿರಿ ತೋಪು ಖರೀದಿ ಮಾಡಿ ಕಟ್ಟಿಗೆ ಸಂಗ್ರಹ ಕೂಡ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಸಮಸ್ಯೆ ಕಂಡುಬಂದಲ್ಲಿ ಅದನ್ನು ಅಲ್ಲಿಯೇ ಬಗೆಹರಿಸಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಂಬುಲೆನ್ಸ್ ಚಾಲಕರು ಹೆಚ್ಚಿನ ಹಣ ವಸೂಲಿ ಮಾಡಿದರೆ ಅಂಥವರನ್ನು ಬಂಧಿಸುತ್ತೇವೆ. ಈ ಬಗ್ಗೆ ಗೃಹ ಸಚಿವರ ಜೊತೆಗೂ ಮಾತನಾಡಿದ್ದೇನೆ’ ಎಂದರು.</p>.<p>‘ಬೆಂಗಳೂರು ಸುತ್ತಮುತ್ತಲಿನ 20 ಕಿಲೊ ಮೀಟರ್ನಿಂದ ಎಲ್ಲರೂ ಶವ ಸಂಸ್ಕಾರಕ್ಕೆ ಇಲ್ಲಿಗೇ ಬರುತ್ತಿದ್ದಾರೆ. ಸುಡಬೇಕು ಎಂಬ ಕಾರಣಕ್ಕೆ ಇಲ್ಲಿಗೇ ತರುತ್ತಿದ್ದಾರೆ. ಈ ಕಾರಣದಿಂದ ಬೆಂಗಳೂರು ನಗರ ವ್ಯಾಪ್ತಿಯ ಚಿತಾ<br />ಗಾರಗಳಲ್ಲಿ ಮೃತದೇಹಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>