ಆ ಕುಟುಂಬದವರು ಜಾನುವಾರುಗಳನ್ನು ಗ್ರಾಮ ಪಂಚಾಯಿತಿಗೆ ತಂದು, ‘ಆಸ್ಪತ್ರೆಯಿಂದ ಬರುವವರೆಗೆ ನೀವೇ ನೋಡಿಕೊಳ್ಳಿ’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು ಎನ್ನಲಾಗಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಪಂಚಾಯಿತಿಯ ಮೂವರು ಮತ್ತು ಕಂದಾಯ ಇಲಾಖೆಯ ಒಬ್ಬ ಸಿಬ್ಬಂದಿ ದನಕರುಗಳಿಗೆ ಮೇವು ಹಾಕಿ, ನೀರು ಕುಡಿಸುವ ಕೆಲಸ ಮಾಡುತ್ತಿದ್ದಾರೆ.