<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಇಳಿಮುಖ ಮಾಡಿರುವುದರಿಂದ ಸೋಂಕಿತರ ಪ್ರಮಾಣ ತುಸು ತಗ್ಗಿದೆ. ಸೋಮವಾರ 58,495 ಪರೀಕ್ಷೆಗಳನ್ನು ನಡೆಸಲಾಗಿದ್ದು, 289 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.ಸದ್ಯ 7,449 ಮಂದಿಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>18 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ. ಸೋಂಕು ದೃಢ ಪ್ರಮಾಣ ಶೇ 0.49 ರಷ್ಟಿದೆ.ಬೆಂಗಳೂರು ನಗರದಲ್ಲಿ 172 ಮಂದಿಕೋವಿಡ್ಪೀಡಿತರಾಗಿದ್ದಾರೆ.ಕೊಡಗು 37, ತುಮಕೂರು 15, ದಕ್ಷಿಣ ಕನ್ನಡ 12, ಕೋಲಾರದಲ್ಲಿ 10 ಪ್ರಕರಣಗಳು ವರದಿಯಾಗಿವೆ.</p>.<p>ಉಳಿದ ಜಿಲ್ಲೆಗಳ ಪೈಕಿಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿಹೊಸ ಪ್ರಕರಣಗಳು ವರದಿಯಾಗಿಲ್ಲ.ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.04 ಲಕ್ಷ ದಾಟಿದೆ.</p>.<p>ಸೋಂಕಿತರಲ್ಲಿ 254 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.59 ಲಕ್ಷ ದಾಟಿದೆ. ಬೆಂಗಳೂರಿನಲ್ಲಿ 6,063 ಸೋಂಕಿತರಿದ್ದಾರೆ. ರಾಮನಗರ, ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.</p>.<p>ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 1.38 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,316ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಇಳಿಮುಖ ಮಾಡಿರುವುದರಿಂದ ಸೋಂಕಿತರ ಪ್ರಮಾಣ ತುಸು ತಗ್ಗಿದೆ. ಸೋಮವಾರ 58,495 ಪರೀಕ್ಷೆಗಳನ್ನು ನಡೆಸಲಾಗಿದ್ದು, 289 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.ಸದ್ಯ 7,449 ಮಂದಿಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>18 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ. ಸೋಂಕು ದೃಢ ಪ್ರಮಾಣ ಶೇ 0.49 ರಷ್ಟಿದೆ.ಬೆಂಗಳೂರು ನಗರದಲ್ಲಿ 172 ಮಂದಿಕೋವಿಡ್ಪೀಡಿತರಾಗಿದ್ದಾರೆ.ಕೊಡಗು 37, ತುಮಕೂರು 15, ದಕ್ಷಿಣ ಕನ್ನಡ 12, ಕೋಲಾರದಲ್ಲಿ 10 ಪ್ರಕರಣಗಳು ವರದಿಯಾಗಿವೆ.</p>.<p>ಉಳಿದ ಜಿಲ್ಲೆಗಳ ಪೈಕಿಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿಹೊಸ ಪ್ರಕರಣಗಳು ವರದಿಯಾಗಿಲ್ಲ.ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.04 ಲಕ್ಷ ದಾಟಿದೆ.</p>.<p>ಸೋಂಕಿತರಲ್ಲಿ 254 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.59 ಲಕ್ಷ ದಾಟಿದೆ. ಬೆಂಗಳೂರಿನಲ್ಲಿ 6,063 ಸೋಂಕಿತರಿದ್ದಾರೆ. ರಾಮನಗರ, ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.</p>.<p>ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 1.38 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,316ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>